<p><strong>ಕೀವ್:</strong> ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ಅಂತ್ಯವಾಡುವ ನಿಟ್ಟಿನಲ್ಲಿ ಉಭಯ ದೇಶಗಳ ಮಧ್ಯೆ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ, ರಷ್ಯಾದ ಸೇನಾಪಡೆ ಉಕ್ರೇನ್ ರಾಜಧಾನಿ ಕೀವ್ ಪ್ರಾಂತ್ಯ ಹಾಗೂ ಇತರ ನಗರಗಳಲ್ಲಿ ಬಾಂಬ್ ದಾಳಿಯನ್ನು ಮುಂದುವರಿಸಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಉಕ್ರೇನ್ನ ಪ್ರದೇಶಗಳಿಗೆ ಪೂರ್ಣ ಪ್ರಮಾಣದಲ್ಲಿ ನುಗ್ಗಲು ವಿಫಲವಾಗಿರುವ ರಷ್ಯಾದ ಪಡೆಗಳು ಬೃಹತ್ ನಗರಗಳ ಮೇಲೆ ಶೆಲ್ ದಾಳಿಯನ್ನು ನಿರಂತರವಾಗಿ ನಡೆಸುತ್ತಿವೆ ಎಂದು ದೂರಿದ್ದಾರೆ.</p>.<p>ಬುಧವಾರ ಕೀವ್ ನಗರದಲ್ಲಿರುವ 12 ಮಹಡಿಯ ಕಟ್ಟಡದ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದೆ. ಇದರಿಂದಾಗಿ ಪಕ್ಕದ ಕಟ್ಟಡಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.</p>.<p>ಕೀವ್ ಸುತ್ತಮುತ್ತಲಿನ 12 ಪಟ್ಟಣಗಳಿಗೆ ವಿದ್ಯುತ್ ಮತ್ತು ನೀರು ಪೂರೈಕೆ ಸ್ಥಗಿತವಾಗಿದೆ. ಮ್ಯೂಸಿಯಂಗಳು, ಚರ್ಚ್ಗಳು ಮತ್ತಿತರ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದೆ. ರಾಜಧಾನಿಯನ್ನು ವಶಕ್ಕೆ ಪಡೆಯಲು ಯತ್ನಿಸುತ್ತಿರುವ ರಷ್ಯಾ ಸೇನೆ ಪ್ರಮುಖ ಸಾರಿಗೆ ಸಂಪರ್ಕಗಳನ್ನು ನಾಶಪಡಿಸಲು ಯತ್ನಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೀವ್:</strong> ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ಅಂತ್ಯವಾಡುವ ನಿಟ್ಟಿನಲ್ಲಿ ಉಭಯ ದೇಶಗಳ ಮಧ್ಯೆ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ, ರಷ್ಯಾದ ಸೇನಾಪಡೆ ಉಕ್ರೇನ್ ರಾಜಧಾನಿ ಕೀವ್ ಪ್ರಾಂತ್ಯ ಹಾಗೂ ಇತರ ನಗರಗಳಲ್ಲಿ ಬಾಂಬ್ ದಾಳಿಯನ್ನು ಮುಂದುವರಿಸಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಉಕ್ರೇನ್ನ ಪ್ರದೇಶಗಳಿಗೆ ಪೂರ್ಣ ಪ್ರಮಾಣದಲ್ಲಿ ನುಗ್ಗಲು ವಿಫಲವಾಗಿರುವ ರಷ್ಯಾದ ಪಡೆಗಳು ಬೃಹತ್ ನಗರಗಳ ಮೇಲೆ ಶೆಲ್ ದಾಳಿಯನ್ನು ನಿರಂತರವಾಗಿ ನಡೆಸುತ್ತಿವೆ ಎಂದು ದೂರಿದ್ದಾರೆ.</p>.<p>ಬುಧವಾರ ಕೀವ್ ನಗರದಲ್ಲಿರುವ 12 ಮಹಡಿಯ ಕಟ್ಟಡದ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದೆ. ಇದರಿಂದಾಗಿ ಪಕ್ಕದ ಕಟ್ಟಡಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.</p>.<p>ಕೀವ್ ಸುತ್ತಮುತ್ತಲಿನ 12 ಪಟ್ಟಣಗಳಿಗೆ ವಿದ್ಯುತ್ ಮತ್ತು ನೀರು ಪೂರೈಕೆ ಸ್ಥಗಿತವಾಗಿದೆ. ಮ್ಯೂಸಿಯಂಗಳು, ಚರ್ಚ್ಗಳು ಮತ್ತಿತರ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದೆ. ರಾಜಧಾನಿಯನ್ನು ವಶಕ್ಕೆ ಪಡೆಯಲು ಯತ್ನಿಸುತ್ತಿರುವ ರಷ್ಯಾ ಸೇನೆ ಪ್ರಮುಖ ಸಾರಿಗೆ ಸಂಪರ್ಕಗಳನ್ನು ನಾಶಪಡಿಸಲು ಯತ್ನಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>