ರಸ್ತೆ ಬದಿಯಲ್ಲಿ ಮಾಂಸಾಹಾರ ಮಾರಾಟ ಮಾಡುವುದು ಭೂಕಬಳಿಕೆಗೆ ಸಮ: ಗುಜರಾತ್ ಸಚಿವ

ಗಾಂಧಿನಗರ: ರಸ್ತೆ ಬದಿಯಲ್ಲಿ ಮೊಟ್ಟೆ ಹಾಗೂ ಮಾಂಸಾಹಾರಿ ಖಾದ್ಯಗಳನ್ನು ಮಾರದಂತೆ ರಾಜ್ಕೋಟ್ ಮತ್ತು ವಡೋದರಾ ನಗರ ಪಾಲಿಕೆಗಳು ಮೌಖಿಕ ಆದೇಶ ಹೊರಡಿಸಿವೆ.
ಈ ಕ್ರಮವನ್ನು ಸಮರ್ಥಿಸಿಕೊಂಡಿರುವ ಗುಜರಾತ್ ಕಂದಾಯ ಸಚಿವ ರಾಜೇಂದ್ರ ತ್ರಿವೇದಿ, ‘ರಸ್ತೆ ಬದಿಯಲ್ಲಿ ಮಾಂಸಾಹಾರಿ ಖಾದ್ಯಗಳನ್ನು ಮಾರಾಟ ಮಾಡುವುದು ತಾತ್ಕಾಲಿಕ ಸ್ವರೂಪದ ಭೂಕಬಳಿಕೆಯ ಕೃತ್ಯ‘ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಇತರ ನಗರಗಳಲ್ಲೂ ಈ ರೀತಿಯ ಆದೇಶಗಳನ್ನು ಹೊರಡಿಸಬಹುದು ಎಂಬ ಮುನ್ಸೂಚನೆಯನ್ನೂ ಅವರು ನೀಡಿದ್ದಾರೆ.
ರಸ್ತೆ ಮತ್ತು ಕಟ್ಟಡ ಸಚಿವ ಪೂರ್ಣೇಶ್ ಮೋದಿ ಸಹ ರಸ್ತೆ ಬದಿಯಲ್ಲಿ ಮಾಂಸಾಹಾರಿ ಖಾದ್ಯಗಳನ್ನು ಮಾರುವುದರ ಬಗ್ಗೆ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.