ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಮಾಜಿ ಅಧ್ಯಕ್ಷ ಗೊಟಬಯಗೆ ಸಿಂಗಪುರದಲ್ಲಿ ಉಳಿಯಲು ಮತ್ತೆ 14 ದಿನ ಅವಕಾಶ

Last Updated 27 ಜುಲೈ 2022, 6:53 IST
ಅಕ್ಷರ ಗಾತ್ರ

ಸಿಂಗಪುರ: ಶ್ರೀಲಂಕಾದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರಿಗೆ ಮತ್ತೆ 14 ದಿನ ಸಿಂಗಪುರದಲ್ಲಿ ಉಳಿದುಕೊಳ್ಳಲು ಅವಕಾಶ ಸಿಕ್ಕಿದೆ. ಅವರ ವೀಸಾ ಅವಧಿಯನ್ನು ಆಗಸ್ಟ್ 11ರವರೆಗೆ ಅಲ್ಲಿನ ಸರ್ಕಾರ ವಿಸ್ತರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶದಿಂದ ಬೆದರಿದ ರಾಜಪಕ್ಸ ಜುಲೈ 9ರಂದು ಅಲ್ಲಿಂದ ಪಲಾಯನ ಮಾಡಿದ್ದರು.

ರಾಜಪಕ್ಸ ಅವರಿಗೆ ಹೊಸ ವೀಸಾ ನೀಡಲಾಗಿದ್ದು, ಆಗಸ್ಟ್ 11ರವರೆಗೆ ಅವರಿಗೆ ಸಿಂಗಪುರದಲ್ಲಿ ಉಳಿದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ‘ದಿ ಸ್ಟ್ರೈಟ್ಸ್ ಟೈಮ್ಸ್’ ವರದಿ ಮಾಡಿದೆ.

ಶ್ರೀಲಂಕಾವು 1948ರ ನಂತರದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಆರ್ಥಿಕ ಬಿಕ್ಕಟ್ಟು ನಿರ್ವಹಿಸುವಲ್ಲಿ ವಿಫಲರಾಗಿದ್ದ ಅಧ್ಯಕ್ಷ ಗೊಟಬಯ ಮನೆಗೆ ಪ್ರತಿಭಟನಾಕಾರರು ನುಗ್ಗಿದ್ದರು. ಅದ್ಕೂ ಮುನ್ನವೇ ಅವರು ಕುಟುಂಬದ ಜೊತೆ ಮನೆ ತೊರೆದಿದ್ದರು.

ಶ್ರೀಲಂಕಾದಿಂದ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದ ರಾಜಪಕ್ಸ, ಬಳಿಕ ಅಲ್ಲಿಂದ ಸಿಂಗಪುರಕ್ಕೆ ತೆರಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT