‘ಅಲ್ಲದೆ ಈ ಎರಡೂ ರಾಷ್ಟ್ರಗಳ ನಾಗರಿಕರಿಗೆ, ಸಿಂಗಪುರದಲ್ಲಿ ಅವರ ಹತ್ತಿರದ ಸಂಬಂಧಿಗಳಿದ್ದಾರೆ. ಕೆಲವರು ಕಾಯಂ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಪರಸ್ಪರ ಭೇಟಿಯಾಗಲು ಇಲ್ಲಿಗೆ ಬರುತ್ತಾರೆ. ಈ ಎರಡೂ ದೇಶಗಳಿಂದ ಆಮದು ಪ್ರಕ್ರಿಯೆಗಳೂ ನಡೆಯುತ್ತಿವೆ. ಈಗ ಅಂತರರಾಷ್ಟ್ರೀಯ ಗಡಿಗಳನ್ನು ಮುಚ್ಚಿದರೆ, ನಮ್ಮ ದೇಶದ ಆರ್ಥಿಕತೆ, ಜೀವನೋಪಾಯದ ಮೇಲೂ ಪರಿಣಾಮ ಬೀರುತ್ತದೆ‘ ಎಂದು ಅವರು ಉತ್ತರಿಸಿದ್ದಾರೆ.