ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೊಟಬಯ ರಾಜಪಕ್ಸ ಖಾಸಗಿ ಭೇಟಿಗಾಗಿ ಬಂದಿದ್ದಾರೆ, ಆಶ್ರಯ ಕೊಟ್ಟಿಲ್ಲ: ಸಿಂಗಾಪುರ 

Last Updated 14 ಜುಲೈ 2022, 15:54 IST
ಅಕ್ಷರ ಗಾತ್ರ

ಸಿಂಗಪುರ: 'ಖಾಸಗಿ ಭೇಟಿಗಾಗಿ ಸಿಂಗಪುರ ಪ್ರವೇಶಿಸಲು ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರಿಗೆ ಗುರುವಾರ ಅನುಮತಿ ನೀಡಲಾಗಿದೆ. ಅವರಿಗೆ ಆಶ್ರಯ ನೀಡಲಾಗಿಲ್ಲ’ ಎಂದು ಸಿಂಗಪುರ ಸ್ಪಷ್ಟಪಡಿಸಿದೆ.

ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕೆ ಶ್ರೀಲಂಕಾದಲ್ಲಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ದೇಶ ತೊರೆದಿದ್ದ ಗೊಟಬಯ ರಾಜಪಕ್ಸ ಮೊದಲಿಗೆ ಮಾಲ್ಡೀವ್ಸ್‌ಗೆ ಹಾರಿದ್ದರು. ಅಲ್ಲಿಯೂ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಂಗಪುರಕ್ಕೆ ತೆರಳಿದ್ದರು.

‘ಖಾಸಗಿ ಭೇಟಿಯ ಮೇಲೆ ಸಿಂಗಪುರ ಪ್ರವೇಶಿಸಲು ರಾಜಪಕ್ಸ ಅವರಿಗೆ ಅನುಮತಿ ನೀಡಿರುವುದು ದೃಢಪಟ್ಟಿದೆ‘ ಎಂದು ಸಿಂಗಪುರದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

‘ಅವರು ಆಶ್ರಯವನ್ನು ಕೇಳಿಲ್ಲ ಮತ್ತು ಅವರಿಗೆ ಯಾವುದೇ ಆಶ್ರಯವನ್ನು ನೀಡಲಾಗಿಲ್ಲ. ಸಿಂಗಪುರವು ಸಾಮಾನ್ಯವಾಗಿ ಆಶ್ರಯಕ್ಕಾಗಿ ಅನುಮತಿಯನ್ನು ನೀಡುವುದಿಲ್ಲ’ ಎಂದು ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT