ಕೊಲಂಬೊ: ಶ್ರೀಲಂಕಾದ ಪೂರ್ವ ಭಾಗದಲ್ಲಿನ ಟ್ರಿಂಕೊಮಲಿ ಜಿಲ್ಲೆಯಲ್ಲಿ ದೋಣಿಯೊಂದು ಮುಳುಗಿ ಮಕ್ಕಳು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ದೋಣಿಯಲ್ಲಿದ್ದ 11 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ’ಕೊಲಂಬೊ ಗೆಜೆಟ್‘ ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ.
ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಕಿನ್ನಿಯ ಮತ್ತು ಕುರುಜನ್ಕುಳಂಗೆ ಈಗಿರುವ ಸೇತುವೆ ಬದಲು ಹೊಸ ಸೇತುವೆ ನಿರ್ಮಾಣ ಮಾಡುತ್ತಿರುವ ಕಾರಣ ಸ್ಥಳೀಯರು ದೋಣಿ ಸೌಲಭ್ಯವನ್ನು ಬಳಸುತ್ತಿದ್ದಾರೆ ಎಂದು ನಿವಾಸಿಗಳು ಹೇಳಿದ್ದಾರೆ.