ಕೊಲಂಬೊ: ಭಾರತದೊಂದಿಗಿನ ಸಂಘರ್ಷವನ್ನು ತಪ್ಪಿಸುವ ನಿಟ್ಟಿನಲ್ಲಿ ಶ್ರೀಲಂಕಾ ಸಂಸತ್ತಿನಲ್ಲಿ ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ನಿಗದಿತ ಭಾಷಣವನ್ನು ರದ್ದುಗೊಳಿಸಲಾಗಿದೆ.
ಚೀನಾದ ಸಾಲದ ಹೊರೆಗೆ ಸಿಲುಕಿಕೊಂಡಿರುವ ಶ್ರೀಲಂಕಾ ಸರ್ಕಾರವು ಭಾರತದೊಂದಿಗಿನ ಸಂಬಂಧವನ್ನು ಹದೆಗೆಡಿಸಿ ಮತ್ತಷ್ಟು ಅಪಾಯವವನ್ನು ಆಹ್ವಾನಿಸಲು ಸಿದ್ಧರಿಲ್ಲ. ಇನ್ನೊಂದೆಡೆ ಕೋವಿಡ್-19 ಲಸಿಕೆಗಳನ್ನು ವಿತರಿಸಿ ಭಾರತ ನೆರೆಯ ರಾಷ್ಟ್ರಕ್ಕೆ ನೆರವಾಗುತ್ತಿದೆ.
ಕೊಲಂಬೊ ಗೆಜೆಟ್ ಮಾಧ್ಯಮದಲ್ಲಿ ಈ ಕುರಿತು ವರದಿ ಪ್ರಕಟವಾಗಿದ್ದು, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಸಂಸತ್ತಿನಲ್ಲಿ ನಿಗದಿತ ಭಾಷಣವನ್ನು ರದ್ದುಗೊಳಿಸುವ ಮೂಲಕ ಭಾರತದೊಂದಿಗಿನ ಮುಖಾಮುಖಿಯನ್ನು ಶ್ರೀಲಂಕಾ ತಪ್ಪಿಸಿದೆ.
ಇತ್ತೀಚೆಗಷ್ಟೇ ಭಾರತವು ಶ್ರೀಲಂಕಾಕ್ಕೆ ಐದು ಲಕ್ಷ ಕೋವಿಡ್-19 ಲಸಿಕೆ ಡೋಸ್ಗಳನ್ನು ಉಡುಗೊರೆಯಾಗಿ ನೀಡಿತ್ತು.
ಕಳೆದ ಕೆಲವು ತಿಂಗಳುಗಳಿಂದ ಶ್ರೀಲಂಕಾದಲ್ಲಿ ಮುಸ್ಲಿಂ ವಿರೋಧಿ ಭಾವನೆ ಕೂಡಾ ಮೂಡಿಬರುತ್ತಿದ್ದು, ಮಸೀದಿಗಳಲ್ಲಿ ಪ್ರಾಣಿ ಬಲಿ ನೀಡುವ ಕುರಿತಾಗಿ ಬೌದ್ಧ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ.