ಆರ್ಥಿಕ ಬಿಕ್ಕಟ್ಟನ್ನು ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ಸರ್ಕಾರದ ಬೆಂಬಲಿಗರು ಕಳೆದ ವಾರ ಹಲ್ಲೆ ನಡೆಸಿದ ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಪರಿಸ್ಥಿತಿ ನಿಭಾಯಿಸಲು ದೇಶದಾದ್ಯಂತ ಕರ್ಫ್ಯೂ ವಿಧಿಸಿದ್ದ ಅಧಿಕಾರಿಗಳು ಭದ್ರತೆಗೆ ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಗಳನ್ನು ನಿಯೋಜಿಸಿದ್ದರು. ಈ ನಡುವೆ ಮಹಿಂದಾ ರಾಜಪಕ್ಸ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.