<p><strong>ಕೊಲಂಬೊ</strong>: ಅಧ್ಯಕ್ಷ ಗೋಟಬಯ ರಾಜಪಕ್ಸೆಅವರ ರಾಜೀನಾಮೆಗೆ ಒತ್ತಾಯಿಸಿ, ಅವರ ನಿವಾಸದ ಮುಂದೆ ಜನರು ನಡೆಸಿದ ಪ್ರತಿಭಟನೆಯನ್ನು ‘ಭಯೋತ್ಪಾದಕ ಕೃತ್ಯ’ ಎಂದು ಸರ್ಕಾರ ಶುಕ್ರವಾರ ಟೀಕಿಸಿದೆ.</p>.<p>ಈ ಪ್ರತಿಭಟನೆ ಹಿಂದೆ ಪ್ರತಿಪಕ್ಷಗಳೊಂದಿಗೆ ಸಂಪರ್ಕ ಹೊಂದಿರುವ ‘ಉಗ್ರಗಾಮಿಗಳ’ ಕೈವಾಡ ಇದೆ ಎಂದೂ ಸರ್ಕಾರ ಆರೋಪಿಸಿದೆ.</p>.<p>ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದ ಜನರು, ದೇಶದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಅಧ್ಯಕ್ಷ ಗೊಟಬಯಾ ರಾಜಪಕ್ಸ ಅವರ ನಿವಾಸದ ಮುಂದೆ ಗುರುವಾರ ರಾತ್ರಿ ಭಾರಿ ಪ್ರತಿಭಟನೆ ನಡೆಸಿದ್ದರು.</p>.<p>ಪ್ರತಿಭಟನೆ ವೇಳೆ ಕೆಲ ಉದ್ರಿಕ್ತರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಪ್ರತಿಭಟನಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಹಾಗೂ ಜಲಫಿರಂಗಿ ಬಳಸಿದ್ದು, ಹಲವರು ಗಾಯಗೊಂಡಿದ್ದಾರೆ. ಅಲ್ಲದೆ ಹಲವು ಮಂದಿಯನ್ನು ಬಂಧಿಸಲಾಗಿದ್ದು, ಕೊಲಂಬೊ ನಗರದ ಬಹುತೇಕ ಭಾಗಗಳಲ್ಲಿ ಕರ್ಫ್ಯೂ ಹೇರಲಾಗಿತ್ತು. ಆ ಬಳಿಕ ಅದನ್ನು ತೆರವು ಮಾಡಲಾಗಿದೆ.</p>.<p>ವಿದೇಶಿ ವಿನಿಮಯದ ತೀವ್ರ ಕೊರತೆ ಎದುರಿಸುತ್ತಿರುವ ಶ್ರೀಲಂಕಾದಲ್ಲಿ, ಇಂಧನ, ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಅಲ್ಲದೆ ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಇಂಧನದ ಕೊರತೆಯಿಂದಾಗಿ ದೇಶದಾದ್ಯಂತ ದಿನಕ್ಕೆ 7-10 ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದರಿಂದ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.</p>.<p><strong>ಭಾರಿ ಬಿಗಿ ಭದ್ರತೆ:</strong>ದೇಶದ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಭಾರೀ ಆಕ್ರೋಶಗೊಂಡ ಪ್ರತಿಭಟನಕಾರರು ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಿದ ಬೆನ್ನಲ್ಲೇ, ಶ್ರೀಲಂಕಾದಾದ್ಯಂತ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.</p>.<p>ಶುಕ್ರವಾರದ ಬಳಿಕ ದೇಶದಾದ್ಯಂತ ಪ್ರತಿಭಟನೆಗಳಿಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೇಶದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನ ಸಾಮಾನ್ಯರು ತಮ್ಮ ನಿವಾಸದ ಎದುರು ಶಾಂತಿಯುತ ಪ್ರತಿಭಟನೆ ನಡೆಸಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕರೆ ನೀಡಲಾಗಿದೆ.</p>.<p><strong>ಓದಿ...<a href="https://www.prajavani.net/world-news/russian-invasion-in-ukraine-killed-153-children-kyiv-worst-hit-924705.html" target="_blank">ಉಕ್ರೇನ್ನಲ್ಲಿ 153 ಮಕ್ಕಳ ಜೀವ ತೆಗೆದ ರಷ್ಯಾ ಸೇನೆಯ ಆಕ್ರಮಣ</a></strong><a href="https://www.prajavani.net/world-news/russian-invasion-in-ukraine-killed-153-children-kyiv-worst-hit-924705.html" target="_blank"></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಅಧ್ಯಕ್ಷ ಗೋಟಬಯ ರಾಜಪಕ್ಸೆಅವರ ರಾಜೀನಾಮೆಗೆ ಒತ್ತಾಯಿಸಿ, ಅವರ ನಿವಾಸದ ಮುಂದೆ ಜನರು ನಡೆಸಿದ ಪ್ರತಿಭಟನೆಯನ್ನು ‘ಭಯೋತ್ಪಾದಕ ಕೃತ್ಯ’ ಎಂದು ಸರ್ಕಾರ ಶುಕ್ರವಾರ ಟೀಕಿಸಿದೆ.</p>.<p>ಈ ಪ್ರತಿಭಟನೆ ಹಿಂದೆ ಪ್ರತಿಪಕ್ಷಗಳೊಂದಿಗೆ ಸಂಪರ್ಕ ಹೊಂದಿರುವ ‘ಉಗ್ರಗಾಮಿಗಳ’ ಕೈವಾಡ ಇದೆ ಎಂದೂ ಸರ್ಕಾರ ಆರೋಪಿಸಿದೆ.</p>.<p>ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದ ಜನರು, ದೇಶದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಅಧ್ಯಕ್ಷ ಗೊಟಬಯಾ ರಾಜಪಕ್ಸ ಅವರ ನಿವಾಸದ ಮುಂದೆ ಗುರುವಾರ ರಾತ್ರಿ ಭಾರಿ ಪ್ರತಿಭಟನೆ ನಡೆಸಿದ್ದರು.</p>.<p>ಪ್ರತಿಭಟನೆ ವೇಳೆ ಕೆಲ ಉದ್ರಿಕ್ತರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಪ್ರತಿಭಟನಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಹಾಗೂ ಜಲಫಿರಂಗಿ ಬಳಸಿದ್ದು, ಹಲವರು ಗಾಯಗೊಂಡಿದ್ದಾರೆ. ಅಲ್ಲದೆ ಹಲವು ಮಂದಿಯನ್ನು ಬಂಧಿಸಲಾಗಿದ್ದು, ಕೊಲಂಬೊ ನಗರದ ಬಹುತೇಕ ಭಾಗಗಳಲ್ಲಿ ಕರ್ಫ್ಯೂ ಹೇರಲಾಗಿತ್ತು. ಆ ಬಳಿಕ ಅದನ್ನು ತೆರವು ಮಾಡಲಾಗಿದೆ.</p>.<p>ವಿದೇಶಿ ವಿನಿಮಯದ ತೀವ್ರ ಕೊರತೆ ಎದುರಿಸುತ್ತಿರುವ ಶ್ರೀಲಂಕಾದಲ್ಲಿ, ಇಂಧನ, ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಅಲ್ಲದೆ ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಇಂಧನದ ಕೊರತೆಯಿಂದಾಗಿ ದೇಶದಾದ್ಯಂತ ದಿನಕ್ಕೆ 7-10 ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದರಿಂದ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.</p>.<p><strong>ಭಾರಿ ಬಿಗಿ ಭದ್ರತೆ:</strong>ದೇಶದ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಭಾರೀ ಆಕ್ರೋಶಗೊಂಡ ಪ್ರತಿಭಟನಕಾರರು ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಿದ ಬೆನ್ನಲ್ಲೇ, ಶ್ರೀಲಂಕಾದಾದ್ಯಂತ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.</p>.<p>ಶುಕ್ರವಾರದ ಬಳಿಕ ದೇಶದಾದ್ಯಂತ ಪ್ರತಿಭಟನೆಗಳಿಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೇಶದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನ ಸಾಮಾನ್ಯರು ತಮ್ಮ ನಿವಾಸದ ಎದುರು ಶಾಂತಿಯುತ ಪ್ರತಿಭಟನೆ ನಡೆಸಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕರೆ ನೀಡಲಾಗಿದೆ.</p>.<p><strong>ಓದಿ...<a href="https://www.prajavani.net/world-news/russian-invasion-in-ukraine-killed-153-children-kyiv-worst-hit-924705.html" target="_blank">ಉಕ್ರೇನ್ನಲ್ಲಿ 153 ಮಕ್ಕಳ ಜೀವ ತೆಗೆದ ರಷ್ಯಾ ಸೇನೆಯ ಆಕ್ರಮಣ</a></strong><a href="https://www.prajavani.net/world-news/russian-invasion-in-ukraine-killed-153-children-kyiv-worst-hit-924705.html" target="_blank"></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>