<p><strong>ಕೊಲಂಬೊ:</strong> ದೇಶವು ಆಹಾರದ ಕೊರತೆ ಎದುರಿಸುತ್ತಿದೆ ಎಂಬ ವರದಿಗಳನ್ನುಶ್ರೀಲಂಕಾ ಸರ್ಕಾರವು ಗುರುವಾರ ನಿರಾಕರಿಸಿದೆ. ಆಹಾರ ಪದಾರ್ಥಗಳ ಅಕ್ರಮ ದಾಸ್ತಾನು ನಿಷೇಧಿಸುವ ಉದ್ದೇಶದಿಂದ ಸಾರ್ವಜನಿಕ ಭದ್ರತಾ ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ತಿಳಿಸಿದೆ.</p>.<p>ಆಹಾರಧಾನ್ಯಗಳ ಶೇಖರಣೆಯನ್ನು ತಡೆಯುವ ಕ್ರಮವಾಗಿ, ಅಗತ್ಯವಸ್ತುಗಳ ಬೆಲೆ ನಿಯಂತ್ರಿಸುವ ತುರ್ತು ಆದೇಶವನ್ನು ಮೂಲಕ ರಾಷ್ಟ್ರದ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಆಗಸ್ಟ್ 31ರಂದು ಹೊರಡಿಸಿದ್ದರು.</p>.<p>ಅಗತ್ಯ ವಸ್ತುಗಳ ಪೂರೈಕೆಯ ಮೇಲಿನ ತುರ್ತು ಆದೇಶವನ್ನು ಸಾರ್ವಜನಿಕ ಭದ್ರತಾ ಸುಗ್ರೀವಾಜ್ಞೆಯ ಮೂಲಕ ಹೊರಡಿಸಲಾಗಿದೆ ಎಂದುಅಧ್ಯಕ್ಷರ ವಕ್ತಾರ ಕಿಂಗ್ಸ್ಲೆ ರತ್ನಾಯಕ್ ಸುದ್ದಿಗಾರರಿಗೆ ತಿಳಿಸಿದರು.</p>.<p>‘ದೇಶದಲ್ಲಿ ಆಹಾರದ ಕೊರತೆ ಎದುರಾಗಿರುವುದಾಗಿ ಕೆಲವು ಸ್ಥಳೀಯ ಮತ್ತು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಈ ವರದಿಗಳಿಗೆ ಯಾವುದೇ ಆಧಾರವಿಲ್ಲ’ ಎಂದು ಸರ್ಕಾರದ ಮಾಹಿತಿ ನಿರ್ದೇಶಕರು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಕೆಲವು ವ್ಯಾಪಾರಿಗಳು ಭತ್ತ, ಅಕ್ಕಿ ಮತ್ತು ಸಕ್ಕರೆಯಂತಹ ಆಹಾರ ಪದಾರ್ಥಗಳನ್ನು ಶೇಖರಿಸಿಟ್ಟುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಇದೆ. ಇದನ್ನು ತಡೆಯಲು ಸಾರ್ವಜನಿಕ ಭದ್ರತಾ ಸುಗ್ರೀವಾಜ್ಞೆಯಡಿಯಲ್ಲಿ ನಿಯಮಗಳನ್ನು ಜಾರಿಗೆ ತಂದು ಆದೇಶ ಹೊರಡಿಸಲಾಗಿದೆ. ಅನಗತ್ಯ ದಾಸ್ತಾನು ವಶಪಡಿಸಿಕೊಂಡು, ಅದನ್ನು ಸರ್ಕಾರಿ ಸಂಸ್ಥೆಗಳ ಸುಪರ್ದಿಗೆ ವಹಿಸುವುದು ಈ ಆದೇಶದ ಉದ್ದೇಶವಾಗಿದೆ ಎಂದು ಸರ್ಕಾರ ಹೇಳಿದೆ.</p>.<p>ಭತ್ತ, ಅಕ್ಕಿ ಮತ್ತು ಸಕ್ಕರೆ ಸೇರಿದಂತೆ ಅಗತ್ಯ ವಸ್ತುಗಳನ್ನು ಸರ್ಕಾರದ ಆದೇಶದ ಬೆಲೆಯಲ್ಲಿ ಮಾರಾಟ ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಮಿಲಿಟರಿ ಇದರ ಉಸ್ತುವಾರಿ ನೋಡಿಕೊಳ್ಳುತ್ತಿದೆ ಎಂದು ಹೇಳಿದೆ.</p>.<p>ಕೋವಿಡ್,ಸ್ಥಳೀಯ ಕರೆನ್ಸಿ ಕುಸಿತ ಸೇರಿದಂತೆ ಹಲವು ಕಾರಣಗಳಿಂದಾಗಿ ಶ್ರೀಲಂಕಾದಲ್ಲಿ ಇತ್ತೀಚಿನ ಕೆಲ ವಾರಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ವ್ಯಾಪಾರಿಗಳು ಅಗತ್ಯವಸ್ತುಗಳನ್ನು ದಾಸ್ತಾನು ಮಾಡಿರುವುದೇ ಇದಕ್ಕೆ ಕಾರಣ ಎಂದು ಸರ್ಕಾರ ದೂಷಿಸಿದೆ.</p>.<p>ಪ್ರವಾಸಿಗರ ಸಂಖ್ಯೆಯಲ್ಲಿನ ಭಾರಿ ಕುಸಿತದ ಪರಿಣಾಮವಾಗಿ ಶ್ರೀಲಂಕಾದ ಆರ್ಥಿಕತೆಯು ಕಳೆದ ವರ್ಷ ದಾಖಲೆಯ ಶೇಕಡಾ 3.6 ರಷ್ಟು ಕುಗ್ಗಿದೆ. ಕೋವಿಡ್ -19 ಪ್ರಕರಣಗಳ ಹೆಚ್ಚಳದಿಂದಾಗಿ ದೇಶದಲ್ಲಿ ಸೋಮವಾರದವರೆಗೆ 16 ದಿನಗಳ ಕರ್ಫ್ಯೂ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ದೇಶವು ಆಹಾರದ ಕೊರತೆ ಎದುರಿಸುತ್ತಿದೆ ಎಂಬ ವರದಿಗಳನ್ನುಶ್ರೀಲಂಕಾ ಸರ್ಕಾರವು ಗುರುವಾರ ನಿರಾಕರಿಸಿದೆ. ಆಹಾರ ಪದಾರ್ಥಗಳ ಅಕ್ರಮ ದಾಸ್ತಾನು ನಿಷೇಧಿಸುವ ಉದ್ದೇಶದಿಂದ ಸಾರ್ವಜನಿಕ ಭದ್ರತಾ ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ತಿಳಿಸಿದೆ.</p>.<p>ಆಹಾರಧಾನ್ಯಗಳ ಶೇಖರಣೆಯನ್ನು ತಡೆಯುವ ಕ್ರಮವಾಗಿ, ಅಗತ್ಯವಸ್ತುಗಳ ಬೆಲೆ ನಿಯಂತ್ರಿಸುವ ತುರ್ತು ಆದೇಶವನ್ನು ಮೂಲಕ ರಾಷ್ಟ್ರದ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಆಗಸ್ಟ್ 31ರಂದು ಹೊರಡಿಸಿದ್ದರು.</p>.<p>ಅಗತ್ಯ ವಸ್ತುಗಳ ಪೂರೈಕೆಯ ಮೇಲಿನ ತುರ್ತು ಆದೇಶವನ್ನು ಸಾರ್ವಜನಿಕ ಭದ್ರತಾ ಸುಗ್ರೀವಾಜ್ಞೆಯ ಮೂಲಕ ಹೊರಡಿಸಲಾಗಿದೆ ಎಂದುಅಧ್ಯಕ್ಷರ ವಕ್ತಾರ ಕಿಂಗ್ಸ್ಲೆ ರತ್ನಾಯಕ್ ಸುದ್ದಿಗಾರರಿಗೆ ತಿಳಿಸಿದರು.</p>.<p>‘ದೇಶದಲ್ಲಿ ಆಹಾರದ ಕೊರತೆ ಎದುರಾಗಿರುವುದಾಗಿ ಕೆಲವು ಸ್ಥಳೀಯ ಮತ್ತು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಈ ವರದಿಗಳಿಗೆ ಯಾವುದೇ ಆಧಾರವಿಲ್ಲ’ ಎಂದು ಸರ್ಕಾರದ ಮಾಹಿತಿ ನಿರ್ದೇಶಕರು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಕೆಲವು ವ್ಯಾಪಾರಿಗಳು ಭತ್ತ, ಅಕ್ಕಿ ಮತ್ತು ಸಕ್ಕರೆಯಂತಹ ಆಹಾರ ಪದಾರ್ಥಗಳನ್ನು ಶೇಖರಿಸಿಟ್ಟುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಇದೆ. ಇದನ್ನು ತಡೆಯಲು ಸಾರ್ವಜನಿಕ ಭದ್ರತಾ ಸುಗ್ರೀವಾಜ್ಞೆಯಡಿಯಲ್ಲಿ ನಿಯಮಗಳನ್ನು ಜಾರಿಗೆ ತಂದು ಆದೇಶ ಹೊರಡಿಸಲಾಗಿದೆ. ಅನಗತ್ಯ ದಾಸ್ತಾನು ವಶಪಡಿಸಿಕೊಂಡು, ಅದನ್ನು ಸರ್ಕಾರಿ ಸಂಸ್ಥೆಗಳ ಸುಪರ್ದಿಗೆ ವಹಿಸುವುದು ಈ ಆದೇಶದ ಉದ್ದೇಶವಾಗಿದೆ ಎಂದು ಸರ್ಕಾರ ಹೇಳಿದೆ.</p>.<p>ಭತ್ತ, ಅಕ್ಕಿ ಮತ್ತು ಸಕ್ಕರೆ ಸೇರಿದಂತೆ ಅಗತ್ಯ ವಸ್ತುಗಳನ್ನು ಸರ್ಕಾರದ ಆದೇಶದ ಬೆಲೆಯಲ್ಲಿ ಮಾರಾಟ ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಮಿಲಿಟರಿ ಇದರ ಉಸ್ತುವಾರಿ ನೋಡಿಕೊಳ್ಳುತ್ತಿದೆ ಎಂದು ಹೇಳಿದೆ.</p>.<p>ಕೋವಿಡ್,ಸ್ಥಳೀಯ ಕರೆನ್ಸಿ ಕುಸಿತ ಸೇರಿದಂತೆ ಹಲವು ಕಾರಣಗಳಿಂದಾಗಿ ಶ್ರೀಲಂಕಾದಲ್ಲಿ ಇತ್ತೀಚಿನ ಕೆಲ ವಾರಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ವ್ಯಾಪಾರಿಗಳು ಅಗತ್ಯವಸ್ತುಗಳನ್ನು ದಾಸ್ತಾನು ಮಾಡಿರುವುದೇ ಇದಕ್ಕೆ ಕಾರಣ ಎಂದು ಸರ್ಕಾರ ದೂಷಿಸಿದೆ.</p>.<p>ಪ್ರವಾಸಿಗರ ಸಂಖ್ಯೆಯಲ್ಲಿನ ಭಾರಿ ಕುಸಿತದ ಪರಿಣಾಮವಾಗಿ ಶ್ರೀಲಂಕಾದ ಆರ್ಥಿಕತೆಯು ಕಳೆದ ವರ್ಷ ದಾಖಲೆಯ ಶೇಕಡಾ 3.6 ರಷ್ಟು ಕುಗ್ಗಿದೆ. ಕೋವಿಡ್ -19 ಪ್ರಕರಣಗಳ ಹೆಚ್ಚಳದಿಂದಾಗಿ ದೇಶದಲ್ಲಿ ಸೋಮವಾರದವರೆಗೆ 16 ದಿನಗಳ ಕರ್ಫ್ಯೂ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>