<p><strong>ಕೊಲಂಬೊ: </strong>ಶ್ರೀಲಂಕಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ದೇಶದಾದ್ಯಂತ ಪ್ರಯಾಣದ ಮೇಲೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ರೈಲು ಮತ್ತು ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.</p>.<p>ಶುಕ್ರವಾರ ರಾತ್ರಿಯಿಂದ ಈ ನಿಯಮ ಜಾರಿಗೆ ಬಂದಿದ್ದು, ಮಂಗಳವಾರ ಮುಂಜಾನೆವರೆಗೆ ಇರಲಿದೆ. ಆರೋಗ್ಯ, ಆಹಾರ, ವಿದ್ಯುತ್ ವಿಭಾಗದ ಸಿಬ್ಬಂದಿ ಮತ್ತು ಚಿಕಿತ್ಸೆಗೆ ತೆರಳುವವರಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.</p>.<p>ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ಡೌನ್ ಹೇರಬೇಕು ಎಂದು ಶ್ರೀಲಂಕಾದ ವೈದ್ಯಕೀಯ ಸಂಘಗಳು ಒತ್ತಾಯಿಸಿದ್ದವು. ಇದರ ಬೆನ್ನಲ್ಲೇ ಸರ್ಕಾರವು ಈ ಕ್ರಮ ಕೈಗೊಂಡಿದೆ. ಈಗಾಗಲೇ ಸಾರ್ವಜನಿಕ ಸಭೆ, ಸಮಾರಂಭ, ವಿವಾಹಗಳನ್ನು ನಿಷೇಧಿಸಲಾಗಿದ್ದು, ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿದೆ.</p>.<p>‘ಕಳೆದ ತಿಂಗಳಲ್ಲಿ ಸಾಂಪ್ರಾದಾಯಿಕ ಹೊಸ ವರ್ಷಾಚರಣೆಗಾಗಿಜನರು ಸೇರಿದ್ದರು. ಹಾಗಾಗಿ ಮುಂದಿನ ಎರಡು ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ’ ಎಂದು ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.</p>.<p>‘ಶ್ರೀಲಂಕಾದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,54,786ಕ್ಕೆ ಏರಿಕೆಯಾಗಿದ್ದು, 1,089 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ’ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ: </strong>ಶ್ರೀಲಂಕಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ದೇಶದಾದ್ಯಂತ ಪ್ರಯಾಣದ ಮೇಲೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ರೈಲು ಮತ್ತು ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.</p>.<p>ಶುಕ್ರವಾರ ರಾತ್ರಿಯಿಂದ ಈ ನಿಯಮ ಜಾರಿಗೆ ಬಂದಿದ್ದು, ಮಂಗಳವಾರ ಮುಂಜಾನೆವರೆಗೆ ಇರಲಿದೆ. ಆರೋಗ್ಯ, ಆಹಾರ, ವಿದ್ಯುತ್ ವಿಭಾಗದ ಸಿಬ್ಬಂದಿ ಮತ್ತು ಚಿಕಿತ್ಸೆಗೆ ತೆರಳುವವರಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.</p>.<p>ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ಡೌನ್ ಹೇರಬೇಕು ಎಂದು ಶ್ರೀಲಂಕಾದ ವೈದ್ಯಕೀಯ ಸಂಘಗಳು ಒತ್ತಾಯಿಸಿದ್ದವು. ಇದರ ಬೆನ್ನಲ್ಲೇ ಸರ್ಕಾರವು ಈ ಕ್ರಮ ಕೈಗೊಂಡಿದೆ. ಈಗಾಗಲೇ ಸಾರ್ವಜನಿಕ ಸಭೆ, ಸಮಾರಂಭ, ವಿವಾಹಗಳನ್ನು ನಿಷೇಧಿಸಲಾಗಿದ್ದು, ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿದೆ.</p>.<p>‘ಕಳೆದ ತಿಂಗಳಲ್ಲಿ ಸಾಂಪ್ರಾದಾಯಿಕ ಹೊಸ ವರ್ಷಾಚರಣೆಗಾಗಿಜನರು ಸೇರಿದ್ದರು. ಹಾಗಾಗಿ ಮುಂದಿನ ಎರಡು ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ’ ಎಂದು ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.</p>.<p>‘ಶ್ರೀಲಂಕಾದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,54,786ಕ್ಕೆ ಏರಿಕೆಯಾಗಿದ್ದು, 1,089 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ’ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>