ತೀವ್ರ ವಿದೇಶಿ ವಿನಿಮಯ ಕೊರತೆಯ ಪರಿಣಾಮ ಶ್ರೀಲಂಕಾ ಸರ್ಕಾರ ಆರ್ಥಿಕ ಮತ್ತು ಇಂಧನ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇಂಧನದ ಕೊರತೆಯಿಂದ ಜನರು ಪೆಟ್ರೋಲ್ ಪಂಪ್ ಮತ್ತು ಸೀಮೆಎಣ್ಣೆ ಕೇಂದ್ರಗಳ ಮುಂದೆ ಸರತಿ ಸಾಲಿನಲ್ಲಿ ಕೂತಿದ್ದಾರೆ. ಪೆಟ್ರೋಲ್ ಪಂಪ್ಗಳು ಮತ್ತು ಸೀಮೆಎಣ್ಣೆ ಕೇಂದ್ರಗಳಿಗೆ ಲಂಕಾ ಸರ್ಕಾರ ಸೇನಾ ಭದ್ರತೆಯನ್ನು ಒದಗಿಸಿದೆ.