ಪೊಲನ್ನರುವಾ ಜಿಲ್ಲೆಯವೀರಕೇತಿಯಾ ಪಟ್ಟಣದಲ್ಲಿ ಸೋಮವಾರ ಸರ್ಕಾರಿ ವಿರೋಧಿ ಗುಂಪುಗಳು
ಕಾರಿನಲ್ಲಿ ತೆರಳುತ್ತಿದ್ದ ಎಸ್ಎಲ್ಪಿಪಿ ಸಂಸದ ಅಮರಕೀರ್ತಿ ಅತುಲಕೊರಲಾ(57) ಅವರ ಕಾರನ್ನು ಸುತ್ತುವರಿದವು. ಈ ವೇಳೆ ಎಸ್ಯುವಿ ಕಾರಿನಿಂದ ಗುಂಡು ಹಾರಿದ ಸದ್ದು ಕೇಳಿತು. ಆಕ್ರೋಶಗೊಂಡ ಪ್ರತಿಭಟನಕಾರರು ಕಾರನ್ನು ಪಲ್ಟಿ ಮಾಡಿದರು.ಕಾರಿನಿಂದ ತಪ್ಪಿಸಿಕೊಂಡ ಸಂಸದ ಸಮೀಪದ ಕಟ್ಟಡವೊಂದಕ್ಕೆ ತೆರಳಿ ಅವಿತುಕೊಂಡಿದ್ದರು. ಸಾವಿರಾರು ಪ್ರತಿಭಟನಕಾರರು ಕಟ್ಟಡವನ್ನು ಸುತ್ತುವರಿದಾಗ ಸಂಸದ ಇಬ್ಬರ ಮೇಲೆ ಗುಂಡು ಹಾರಿಸಿದರು. ಈ ವೇಳೆ 27 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಬಳಿಕ ಸಂಸದರು ತಾವೇ ಗುಂಡು ಹಾರಿಸಿಕೊಂಡಿದ್ದಾರೆ.