<p><strong>ಕೊಲಂಬೊ:</strong> ದ್ವೀಪ ರಾಷ್ಟ್ರದಲ್ಲಿ ಮೂರು ದಶಕಗಳ ಕಾಲ ನಡೆದ ಸಂಘರ್ಷದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಕುರಿತು ತನಿಖೆ ನಡೆಸಲು ಅಂತರರಾಷ್ಟ್ರೀಯ ಸ್ವತಂತ್ರ ತನಿಖಾ ವ್ಯವಸ್ಥೆಯನ್ನು ರಚಿಸಬೇಕು ಎಂದುಶ್ರೀಲಂಕಾದಲ್ಲಿನ ಅಲ್ಪಸಂಖ್ಯಾತ ತಮಿಳರು ಇರುವ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ ಒತ್ತಾಯಿಸಿವೆ.</p>.<p>‘ಈ ತನಿಖೆಗೆ ನಿರ್ದಿಷ್ಟ ಸಮಯದ ಮಿತಿಯನ್ನು ಕೂಡ ನಿರ್ಧರಿಸಬೇಕು’ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ (ಯುಎನ್ಎಚ್ಆರ್ಸಿ) ಬರೆಯಲಾದ ಪತ್ರದಲ್ಲಿ ಮನವಿ ಮಾಡಲಾಗಿದೆ.</p>.<p>ಈ ಕುರಿತಾಗಿ ಹೊಸ ನಿರ್ಣಯವನ್ನು ಮಂಡಿಸುವಂತೆ ಸಂಘಟನೆಗಳು ಒತ್ತಾಯಿಸಿವೆ. ಶ್ರೀಲಂಕಾಗೆ ಸಂಬಂಧಿಸಿದಂತೆ ಯುಎನ್ಹೆಚ್ಆರ್ಸಿಯು 2013 ರಿಂದ ಸತತ ಮೂರು ನಿರ್ಣಯಗಳನ್ನು ಅಂಗೀಕರಿಸಿತ್ತು. ಈ ನಿರ್ಣಯದಲ್ಲಿ 2009ರಲ್ಲಿ ಶ್ರೀಲಂಕಾ ಸರ್ಕಾರ ಮತ್ತು ಎಲ್ಟಿಟಿಇ ನಡುವೆ ನಡೆದ ನಾಗರಿಕ ಯುದ್ಧದ ಬಗ್ಗೆ ತನಿಖೆ ನಡೆಸಬೇಕು ಎಂದು ಸೂಚಿಸಲಾಗಿತ್ತು.</p>.<p>‘ಶ್ರೀಲಂಕಾ ಈ ಸಂಬಂಧ ತನಿಖೆ ನಡೆಸುವಲ್ಲಿ ವಿಫಲವಾಗಿದೆ. ಹಾಗಾಗಿ ಹೊಸ ನಿರ್ಣಯವನ್ನು ಮಂಡಿಸಬೇಕು. ವಿಶ್ವಸಂಸ್ಥೆಯ ಭದ್ರತಾ ಸಮಿತಿ ಈ ಬಗ್ಗೆ ವಿಚಾರಣೆ ನಡೆಸಿ, ಕ್ರಮಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ದ್ವೀಪ ರಾಷ್ಟ್ರದಲ್ಲಿ ಮೂರು ದಶಕಗಳ ಕಾಲ ನಡೆದ ಸಂಘರ್ಷದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಕುರಿತು ತನಿಖೆ ನಡೆಸಲು ಅಂತರರಾಷ್ಟ್ರೀಯ ಸ್ವತಂತ್ರ ತನಿಖಾ ವ್ಯವಸ್ಥೆಯನ್ನು ರಚಿಸಬೇಕು ಎಂದುಶ್ರೀಲಂಕಾದಲ್ಲಿನ ಅಲ್ಪಸಂಖ್ಯಾತ ತಮಿಳರು ಇರುವ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ ಒತ್ತಾಯಿಸಿವೆ.</p>.<p>‘ಈ ತನಿಖೆಗೆ ನಿರ್ದಿಷ್ಟ ಸಮಯದ ಮಿತಿಯನ್ನು ಕೂಡ ನಿರ್ಧರಿಸಬೇಕು’ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ (ಯುಎನ್ಎಚ್ಆರ್ಸಿ) ಬರೆಯಲಾದ ಪತ್ರದಲ್ಲಿ ಮನವಿ ಮಾಡಲಾಗಿದೆ.</p>.<p>ಈ ಕುರಿತಾಗಿ ಹೊಸ ನಿರ್ಣಯವನ್ನು ಮಂಡಿಸುವಂತೆ ಸಂಘಟನೆಗಳು ಒತ್ತಾಯಿಸಿವೆ. ಶ್ರೀಲಂಕಾಗೆ ಸಂಬಂಧಿಸಿದಂತೆ ಯುಎನ್ಹೆಚ್ಆರ್ಸಿಯು 2013 ರಿಂದ ಸತತ ಮೂರು ನಿರ್ಣಯಗಳನ್ನು ಅಂಗೀಕರಿಸಿತ್ತು. ಈ ನಿರ್ಣಯದಲ್ಲಿ 2009ರಲ್ಲಿ ಶ್ರೀಲಂಕಾ ಸರ್ಕಾರ ಮತ್ತು ಎಲ್ಟಿಟಿಇ ನಡುವೆ ನಡೆದ ನಾಗರಿಕ ಯುದ್ಧದ ಬಗ್ಗೆ ತನಿಖೆ ನಡೆಸಬೇಕು ಎಂದು ಸೂಚಿಸಲಾಗಿತ್ತು.</p>.<p>‘ಶ್ರೀಲಂಕಾ ಈ ಸಂಬಂಧ ತನಿಖೆ ನಡೆಸುವಲ್ಲಿ ವಿಫಲವಾಗಿದೆ. ಹಾಗಾಗಿ ಹೊಸ ನಿರ್ಣಯವನ್ನು ಮಂಡಿಸಬೇಕು. ವಿಶ್ವಸಂಸ್ಥೆಯ ಭದ್ರತಾ ಸಮಿತಿ ಈ ಬಗ್ಗೆ ವಿಚಾರಣೆ ನಡೆಸಿ, ಕ್ರಮಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>