ಕೊಲಂಬೊ: ದ್ವೀಪ ರಾಷ್ಟ್ರದಲ್ಲಿ ಮೂರು ದಶಕಗಳ ಕಾಲ ನಡೆದ ಸಂಘರ್ಷದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಕುರಿತು ತನಿಖೆ ನಡೆಸಲು ಅಂತರರಾಷ್ಟ್ರೀಯ ಸ್ವತಂತ್ರ ತನಿಖಾ ವ್ಯವಸ್ಥೆಯನ್ನು ರಚಿಸಬೇಕು ಎಂದುಶ್ರೀಲಂಕಾದಲ್ಲಿನ ಅಲ್ಪಸಂಖ್ಯಾತ ತಮಿಳರು ಇರುವ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ ಒತ್ತಾಯಿಸಿವೆ.