ಕೊಲಂಬೊ (ಪಿಟಿಐ): ಆರ್ಥಿಕ ಬಿಕ್ಕಟ್ಟು ಮತ್ತು ತೀವ್ರ ಇಂಧನ ಕೊರತೆಯನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಜುಲೈ 10ರವರೆಗೆ ಅಗತ್ಯ ಸೇವೆಗಳನ್ನು ಮಾತ್ರ ನಿರ್ವಹಿಸಲಾಗುವುದು, ಇತರ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂಧು ಅಲ್ಲಿನ ಸರ್ಕಾರ ಸೋಮವಾರ ಘೋಷಿಸಿದೆ.
ಆರೋಗ್ಯ, ರಕ್ಷಣೆ, ವಿದ್ಯುತ್ ಮತ್ತು ರಫ್ತು ವಲಯಗಳಿಗೆ ಮಾತ್ರ ಇಂಧನವನ್ನು ನೀಡಲಾಗುವುದು ಎಂದು ಸಂಪುಟದ ವಕ್ತಾರ ಬಂಡುಲ ಗುಣವರ್ಧನ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆಹಾರ, ಇಂಧನ ಮತ್ತು ವಿದ್ಯುತ್ ಕೊರತೆ ಎದುರಾಗಿದ್ದು, ಆಮದು ತೈಲವನ್ನೂ ಖರೀದಿಸಲು ಸಾಧ್ಯವಿಲ್ಲ ಎಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಹೇಳಿದ ಕೆಲ ದಿನಗಳ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ.