<p><strong>ಕೊಲಂಬೊ</strong>: ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಶ್ರೀಲಂಕಾದಲ್ಲಿ ಪ್ರತಿಭಟನೆಗಳು ಮುಂದುವರಿದಿವೆ. ಇದೇ ವೇಳೆ, ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಭವ್ಯ ಅರಮನೆಗೆ ಪ್ರತಿಭಟನಾಕಾರರು ನುಗ್ಗಿದ್ದಾರೆ.</p>.<p>ಐಷಾರಾಮಿ ಅರಮನೆಯೊಳಗಿರುವ ನೂರಾರು ಪ್ರತಿಭಟನಾಕಾರರು ಜಿಮ್, ಈಜುಕೊಳ ಹಾಗೂ ಬೆಡ್ರೂಮ್ಗಳನ್ನು ಬಳಸಿ ಸಂಭ್ರಮಿಸುತ್ತಿದ್ದಾರೆ. ಇದನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. </p>.<p>ಸುದ್ದಿಸಂಸ್ಥೆ ‘ಎಎನ್ಐ’ ಹಂಚಿಕೊಂಡ ವಿಡಿಯೊದಲ್ಲಿ, ಸ್ಥಳೀಯ ನಿವಾಸಿಯೊಬ್ಬರು ತಮ್ಮ ಕುಟುಂಬದೊಂದಿಗೆ ಬಂಗಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.</p>.<p>‘ದೇಶವು ಭ್ರಷ್ಟಾಚಾರ ಮುಕ್ತವಾಗಿದೆ. ಎಲ್ಲವೂ ಶಾಂತಿಯುತವಾಗಿದೆ. ಇದನ್ನು ಆಚರಿಸಲು ಕುಟುಂಬದೊಂದಿಗೆ ಇಲ್ಲಿಗೆ ಬಂದಿದ್ದೇನೆ. ನಾವೆಲ್ಲರೂ ಭವನದಲ್ಲಿಯೇ ಊಟ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ನನ್ನ ಮಕ್ಕಳೊಂದಿಗೆ ಇಲ್ಲಿಗೆ ಬಂದು ಊಟ ಮಾಡಲು ನನಗೆ ಅವಕಾಶ ಸಿಕ್ಕಿತು. ರಾಷ್ಟ್ರಪತಿ ಭವನದಲ್ಲಿ ಊಟವೆಂದರೆ, ಅದು ರಾಜಮನೆತನದ ಊಟ’ ಎಂಬುದಾಗಿ ಅವರು ಹೇಳಿದ್ದಾರೆ.</p>.<p>‘ಅವರು(ಗೊಟಬಯ) ಜನರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದರು. ಮಿಲಿಟರಿ ಪಡೆಗಳನ್ನು ಬಳಸಿಕೊಂಡು ಅಧಿಕಾರದಲ್ಲಿದ್ದರು. ಯುವಕರು ಈ ವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದಾರೆ' ಎಂದು ಮತ್ತೊಬ್ಬ ಪ್ರತಿಭಟನಾಕಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಜನರ ಆಕ್ರೋಶಕ್ಕೆ ಗುರಿಯಾಗಿ ಪಲಾಯನ ಮಾಡಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಎಲ್ಲಿಗೆ ತೆರಳಿದ್ದಾರೆ ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಶ್ರೀಲಂಕಾದಲ್ಲಿ ಪ್ರತಿಭಟನೆಗಳು ಮುಂದುವರಿದಿವೆ. ಇದೇ ವೇಳೆ, ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಭವ್ಯ ಅರಮನೆಗೆ ಪ್ರತಿಭಟನಾಕಾರರು ನುಗ್ಗಿದ್ದಾರೆ.</p>.<p>ಐಷಾರಾಮಿ ಅರಮನೆಯೊಳಗಿರುವ ನೂರಾರು ಪ್ರತಿಭಟನಾಕಾರರು ಜಿಮ್, ಈಜುಕೊಳ ಹಾಗೂ ಬೆಡ್ರೂಮ್ಗಳನ್ನು ಬಳಸಿ ಸಂಭ್ರಮಿಸುತ್ತಿದ್ದಾರೆ. ಇದನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. </p>.<p>ಸುದ್ದಿಸಂಸ್ಥೆ ‘ಎಎನ್ಐ’ ಹಂಚಿಕೊಂಡ ವಿಡಿಯೊದಲ್ಲಿ, ಸ್ಥಳೀಯ ನಿವಾಸಿಯೊಬ್ಬರು ತಮ್ಮ ಕುಟುಂಬದೊಂದಿಗೆ ಬಂಗಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.</p>.<p>‘ದೇಶವು ಭ್ರಷ್ಟಾಚಾರ ಮುಕ್ತವಾಗಿದೆ. ಎಲ್ಲವೂ ಶಾಂತಿಯುತವಾಗಿದೆ. ಇದನ್ನು ಆಚರಿಸಲು ಕುಟುಂಬದೊಂದಿಗೆ ಇಲ್ಲಿಗೆ ಬಂದಿದ್ದೇನೆ. ನಾವೆಲ್ಲರೂ ಭವನದಲ್ಲಿಯೇ ಊಟ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ನನ್ನ ಮಕ್ಕಳೊಂದಿಗೆ ಇಲ್ಲಿಗೆ ಬಂದು ಊಟ ಮಾಡಲು ನನಗೆ ಅವಕಾಶ ಸಿಕ್ಕಿತು. ರಾಷ್ಟ್ರಪತಿ ಭವನದಲ್ಲಿ ಊಟವೆಂದರೆ, ಅದು ರಾಜಮನೆತನದ ಊಟ’ ಎಂಬುದಾಗಿ ಅವರು ಹೇಳಿದ್ದಾರೆ.</p>.<p>‘ಅವರು(ಗೊಟಬಯ) ಜನರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದರು. ಮಿಲಿಟರಿ ಪಡೆಗಳನ್ನು ಬಳಸಿಕೊಂಡು ಅಧಿಕಾರದಲ್ಲಿದ್ದರು. ಯುವಕರು ಈ ವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದಾರೆ' ಎಂದು ಮತ್ತೊಬ್ಬ ಪ್ರತಿಭಟನಾಕಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಜನರ ಆಕ್ರೋಶಕ್ಕೆ ಗುರಿಯಾಗಿ ಪಲಾಯನ ಮಾಡಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಎಲ್ಲಿಗೆ ತೆರಳಿದ್ದಾರೆ ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>