<p><strong>ಕೊಲಂಬೊ</strong>: ಮಾಲ್ಡೀವ್ಸ್ಗೆ ಪಲಾಯನಗೈದಿರುವ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಸಂಸತ್ತಿನ ಸ್ಪೀಕರ್ಗೆ ದೂರವಾಣಿ ಕರೆ ಮಾಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಇಂದೇ (ಬುಧವಾರ) ಕಳುಹಿಸಲಾಗುವುದು ಎಂದು ದೂರವಾಣಿ ಮೂಲಕ ತಿಳಿಸಿದ್ದಾರೆ.</p>.<p>‘ಅಧ್ಯಕ್ಷರು ನನ್ನೊಂದಿಗೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಇಂದು ಸ್ವೀಕರಿಸಲಾಗುವುದು. ಇದನ್ನು ಗೊಟಬಯ ಅವರೇ ಖಚಿತಪಡಿಸಿದ್ದಾರೆ’ ಎಂದು ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಜುಲೈ 20ರಂದು ನೂತನ ಅಧ್ಯಕ್ಷರ ನೇಮಕ ಮಾಡಲಾಗುವುದು. ನಾವು ರೂಪಿಸಿರುವ ಸಂಸದೀಯ ಪ್ರಕ್ರಿಯೆಯಲ್ಲಿ ವಿಶ್ವಾಸವಿಟ್ಟು ಶಾಂತಿಯುತವಾಗಿರಿ ಎಂದು ಸಾರ್ವಜನಿಕರಲ್ಲಿ ಸ್ಪೀಕರ್ ಮನವಿ ಮಾಡಿದ್ದಾರೆ.</p>.<p>ಗೊಟಬಯ ರಾಜಪಕ್ಸ ದೇಶವನ್ನು ತೊರೆದ ನಂತರ ಶ್ರೀಲಂಕಾದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಲಂಕೆಯಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಇದಕ್ಕೂ ಮಣಿಯದ ನಾಗರಿಕರು ಅಲ್ಲಿನ ಭದ್ರತಾ ಪಡೆಗಳ ವಿರುದ್ಧ ಕಾದಾಟಕ್ಕೆ ಇಳಿದಿದ್ದಾರೆ. </p>.<p><strong>ಇದನ್ನೂ ಓದಿ–</strong><a href="https://www.prajavani.net/world-news/sri-lanka-declares-state-of-emergency-after-president-gotabaya-rajpakasa-fled-the-country-953934.html" target="_blank"><strong>ಭುಗಿಲೆದ್ದ ಜನರ ಆಕ್ರೋಶ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಮಾಲ್ಡೀವ್ಸ್ಗೆ ಪಲಾಯನಗೈದಿರುವ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಸಂಸತ್ತಿನ ಸ್ಪೀಕರ್ಗೆ ದೂರವಾಣಿ ಕರೆ ಮಾಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಇಂದೇ (ಬುಧವಾರ) ಕಳುಹಿಸಲಾಗುವುದು ಎಂದು ದೂರವಾಣಿ ಮೂಲಕ ತಿಳಿಸಿದ್ದಾರೆ.</p>.<p>‘ಅಧ್ಯಕ್ಷರು ನನ್ನೊಂದಿಗೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಇಂದು ಸ್ವೀಕರಿಸಲಾಗುವುದು. ಇದನ್ನು ಗೊಟಬಯ ಅವರೇ ಖಚಿತಪಡಿಸಿದ್ದಾರೆ’ ಎಂದು ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಜುಲೈ 20ರಂದು ನೂತನ ಅಧ್ಯಕ್ಷರ ನೇಮಕ ಮಾಡಲಾಗುವುದು. ನಾವು ರೂಪಿಸಿರುವ ಸಂಸದೀಯ ಪ್ರಕ್ರಿಯೆಯಲ್ಲಿ ವಿಶ್ವಾಸವಿಟ್ಟು ಶಾಂತಿಯುತವಾಗಿರಿ ಎಂದು ಸಾರ್ವಜನಿಕರಲ್ಲಿ ಸ್ಪೀಕರ್ ಮನವಿ ಮಾಡಿದ್ದಾರೆ.</p>.<p>ಗೊಟಬಯ ರಾಜಪಕ್ಸ ದೇಶವನ್ನು ತೊರೆದ ನಂತರ ಶ್ರೀಲಂಕಾದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಲಂಕೆಯಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಇದಕ್ಕೂ ಮಣಿಯದ ನಾಗರಿಕರು ಅಲ್ಲಿನ ಭದ್ರತಾ ಪಡೆಗಳ ವಿರುದ್ಧ ಕಾದಾಟಕ್ಕೆ ಇಳಿದಿದ್ದಾರೆ. </p>.<p><strong>ಇದನ್ನೂ ಓದಿ–</strong><a href="https://www.prajavani.net/world-news/sri-lanka-declares-state-of-emergency-after-president-gotabaya-rajpakasa-fled-the-country-953934.html" target="_blank"><strong>ಭುಗಿಲೆದ್ದ ಜನರ ಆಕ್ರೋಶ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>