<p><strong>ಕೊಲಂಬೊ</strong>: ನೆರೆಯ ಶ್ರೀಲಂಕಾದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳು ಒಪ್ಪುವ ವ್ಯಕ್ತಿಯನ್ನು ಪ್ರಧಾನಿ ಹುದ್ದೆಗೆ ನಾಮನಿರ್ದೇಶನ ಮಾಡುವಂತೆ ಸ್ಪೀಕರ್ ಮಹಿಂದ ಯಪ ಅಬ್ಯೆವರ್ದನ ಅವರಿಗೆ ಹಂಗಾಮಿ ಅಧ್ಯಕ್ಷ ಮತ್ತು ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ಸೂಚಿಸಿದ್ದಾರೆ.</p>.<p>ಪ್ರಧಾನಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಸೋಮವಾರ ಈ ಸಂಬಂಧ ಸಚಿವ ಸಂಪುಟಸಭೆ ನಡೆಸಿ ಚರ್ಚಿಸಿರುವುದಾಗಿ ತಿಳಿಸಲಾಗಿದೆ.</p>.<p>ಆದಷ್ಟು ಬೇಗ ಎಲ್ಲ ಪಕ್ಷಗಳ ಸರ್ಕಾರ ರಚನೆಯಾಗಬೇಕು ಮತ್ತು ನಾವು ನಮ್ಮ ಜವಾಬ್ದಾರಿಗಳನ್ನು ಅವರಿಗೆ ಹಸ್ತಾಂತರಿಸಬೇಕು ಎಂಬುದು ಸಭೆಯಲ್ಲಿ ಭಾಗವಹಿಸಿದ್ದ ಸಚಿವರ ಅಭಿಪ್ರಾಯವಾಗಿದೆ ಎಂದೂ ತಿಳಿಸಲಾಗಿದೆ.</p>.<p>ಆದ್ದರಿಂದ, ಈಗ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಸೇರಿ ಎಲ್ಲ ಪಕ್ಷಗಳ ಸರ್ಕಾರ ರಚಿಸುವುದು ಅನಿವಾರ್ಯವಾಗಿದೆ.</p>.<p>ಗೊಟಬಯ ರಾಜಪಕ್ಸ ಅವರಿಂದ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ರಾನಿಲ್ ವಿಕ್ರಮ ಸಿಂಘೆ ಪ್ರತಿಭಟನಾಕಾರರ ತೀವ್ರ ಆಕ್ರೋಶ ಎದುರಿಸುತ್ತಿದ್ದಾರೆ.</p>.<p>ಬುಧವಾರ ವಿಕ್ರಮಸಿಂಘೆ ಅವರು ಪ್ರಭಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಸಂದರ್ಭ ಕಚೇರಿ ಎದುರು ಸೇರಿದ್ದ ಪ್ರತಿಭಟನಾಕಾರರು ಸಂಸತ್ ಭವನದ ಆವರಣಕ್ಕೆ ನುಗ್ಗಲು ಯತ್ನಿಸಿದರು. ಅಶ್ರುವಾಯು ಪ್ರಯೋಗಿಸಿದ ಪೊಲೀಸರು ಸ್ಪೀಕರ್ ಅಧಿಕೃತ ಕಚೇರಿ ಬಳಿಯಿಂದ ಪ್ರತಿಭಟನಾಕಾರರನ್ನು ಚದುರಿಸಿದರು.</p>.<p>ಪ್ರತಿಭಟನಾಕಾರರ ಪೈಕಿ 26 ವರ್ಷದ ವ್ಯಕ್ತಿ ಉಸಿರಾಟ ಸಮಸ್ಯೆಯಿಂದ ಅಸುನೀಗಿದ್ದಾರೆ. ಇತರೆ 37 ಮಂದಿ ಸಹ ಗಾಯಗೊಂಡಿದ್ದಾರೆ.</p>.<p>ಇವನ್ನೂ ಓದಿ..</p>.<p><a href="https://www.prajavani.net/world-news/sri-lanka-crisis-intensifies-pressure-mounts-on-ranils-resignation-954194.html" itemprop="url">ಶ್ರೀಲಂಕಾದಲ್ಲಿ ಬಿಕ್ಕಟ್ಟು ತೀವ್ರ: ರಾನಿಲ್ ರಾಜೀನಾಮೆಗೆ ಒತ್ತಡ </a></p>.<p><a href="https://www.prajavani.net/world-news/president-gotabaya-rajapaksa-flees-sri-lanka-amid-public-revolt-954144.html" itemprop="url">ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ: ಅಧ್ಯಕ್ಷ ಪರಾರಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ನೆರೆಯ ಶ್ರೀಲಂಕಾದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳು ಒಪ್ಪುವ ವ್ಯಕ್ತಿಯನ್ನು ಪ್ರಧಾನಿ ಹುದ್ದೆಗೆ ನಾಮನಿರ್ದೇಶನ ಮಾಡುವಂತೆ ಸ್ಪೀಕರ್ ಮಹಿಂದ ಯಪ ಅಬ್ಯೆವರ್ದನ ಅವರಿಗೆ ಹಂಗಾಮಿ ಅಧ್ಯಕ್ಷ ಮತ್ತು ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ಸೂಚಿಸಿದ್ದಾರೆ.</p>.<p>ಪ್ರಧಾನಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಸೋಮವಾರ ಈ ಸಂಬಂಧ ಸಚಿವ ಸಂಪುಟಸಭೆ ನಡೆಸಿ ಚರ್ಚಿಸಿರುವುದಾಗಿ ತಿಳಿಸಲಾಗಿದೆ.</p>.<p>ಆದಷ್ಟು ಬೇಗ ಎಲ್ಲ ಪಕ್ಷಗಳ ಸರ್ಕಾರ ರಚನೆಯಾಗಬೇಕು ಮತ್ತು ನಾವು ನಮ್ಮ ಜವಾಬ್ದಾರಿಗಳನ್ನು ಅವರಿಗೆ ಹಸ್ತಾಂತರಿಸಬೇಕು ಎಂಬುದು ಸಭೆಯಲ್ಲಿ ಭಾಗವಹಿಸಿದ್ದ ಸಚಿವರ ಅಭಿಪ್ರಾಯವಾಗಿದೆ ಎಂದೂ ತಿಳಿಸಲಾಗಿದೆ.</p>.<p>ಆದ್ದರಿಂದ, ಈಗ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಸೇರಿ ಎಲ್ಲ ಪಕ್ಷಗಳ ಸರ್ಕಾರ ರಚಿಸುವುದು ಅನಿವಾರ್ಯವಾಗಿದೆ.</p>.<p>ಗೊಟಬಯ ರಾಜಪಕ್ಸ ಅವರಿಂದ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ರಾನಿಲ್ ವಿಕ್ರಮ ಸಿಂಘೆ ಪ್ರತಿಭಟನಾಕಾರರ ತೀವ್ರ ಆಕ್ರೋಶ ಎದುರಿಸುತ್ತಿದ್ದಾರೆ.</p>.<p>ಬುಧವಾರ ವಿಕ್ರಮಸಿಂಘೆ ಅವರು ಪ್ರಭಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಸಂದರ್ಭ ಕಚೇರಿ ಎದುರು ಸೇರಿದ್ದ ಪ್ರತಿಭಟನಾಕಾರರು ಸಂಸತ್ ಭವನದ ಆವರಣಕ್ಕೆ ನುಗ್ಗಲು ಯತ್ನಿಸಿದರು. ಅಶ್ರುವಾಯು ಪ್ರಯೋಗಿಸಿದ ಪೊಲೀಸರು ಸ್ಪೀಕರ್ ಅಧಿಕೃತ ಕಚೇರಿ ಬಳಿಯಿಂದ ಪ್ರತಿಭಟನಾಕಾರರನ್ನು ಚದುರಿಸಿದರು.</p>.<p>ಪ್ರತಿಭಟನಾಕಾರರ ಪೈಕಿ 26 ವರ್ಷದ ವ್ಯಕ್ತಿ ಉಸಿರಾಟ ಸಮಸ್ಯೆಯಿಂದ ಅಸುನೀಗಿದ್ದಾರೆ. ಇತರೆ 37 ಮಂದಿ ಸಹ ಗಾಯಗೊಂಡಿದ್ದಾರೆ.</p>.<p>ಇವನ್ನೂ ಓದಿ..</p>.<p><a href="https://www.prajavani.net/world-news/sri-lanka-crisis-intensifies-pressure-mounts-on-ranils-resignation-954194.html" itemprop="url">ಶ್ರೀಲಂಕಾದಲ್ಲಿ ಬಿಕ್ಕಟ್ಟು ತೀವ್ರ: ರಾನಿಲ್ ರಾಜೀನಾಮೆಗೆ ಒತ್ತಡ </a></p>.<p><a href="https://www.prajavani.net/world-news/president-gotabaya-rajapaksa-flees-sri-lanka-amid-public-revolt-954144.html" itemprop="url">ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ: ಅಧ್ಯಕ್ಷ ಪರಾರಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>