<p><strong>ಕೊಲಂಬೊ: </strong>ಶ್ರೀಲಂಕಾದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ರಾಜಪಕ್ಸೆ ಸಹೋದರರ ನೇತೃತ್ವ ಸರ್ಕಾರದ ಮೊದಲ ಸಂಸತ್ತಿನ ಅಧಿವೇಶನ ಆಗಸ್ಟ್ 20ರಂದು ನಡೆಯಲಿದೆ.</p>.<p>’ಕೋವಿಡ್ 19’ ಸೋಂಕು ನಿಯಂತ್ರಣ ’ಶಿಷ್ಟಾಚಾರ’ಗಳೊಂದಿಗೆ ಸಂಸತ್ತಿನ ಮೊದಲ ಅಧಿವೇಶನಕ್ಕೆ ಬೇಕಾದ ಸಿದ್ಧತೆಗಳನ್ನು ನಡೆಸುತ್ತಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸದ್ಯ ಶ್ರೀಲಂಕಾದಲ್ಲಿ 2844 ಸೋಂಕಿತ ಪ್ರಕರಣಗಳಿವೆ. 2579 ಮಂದಿ ಗುಣಮುಖರಾಗಿದ್ದಾರೆ. 11 ಮಂದಿ ಸಾವನ್ನಪ್ಪಿದ್ದಾರೆ.</p>.<p>’ಸಂಸತ್ ಭವನದೊಳಗೆ ಸಂಸದರು ಕುಳಿತುಕೊಳ್ಳುವ ಆಸನಗಳ ನಡುವೆ ಒಂದು ಮೀಟರ್ ಅಂತರ ಕಾಯ್ದುಕೊಂಡಿದ್ದೇವೆ. ಪ್ರತಿಯೊಬ್ಬರಿಗೂ ಮಾಸ್ಕ್ ಧರಿಸಿ ಬರಲು ಸೂಚಿಸಲಾಗಿದೆ. ಈಗಾಗಲೇ ಸಂಸತ್ ಭವನದ ಎಲ್ಲ ಕೊಠಡಿಗಳನ್ನೂ ಸ್ಯಾನಿಟೈಸ್ ಮಾಡಲಾಗಿದೆ’ ಎಂದುಸಂಸತ್ತಿನ ಸಾರ್ಜೆಂಟ್-ಅಟ್-ಆರ್ಮ್ಸ್ ನರೇಂದ್ರ ಫರ್ನಾಂಡೊ ತಿಳಿಸಿದ್ದಾರೆ.</p>.<p>ಆಗಸ್ಟ್ 5 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಅವರ ಕಿರಿಯ ಸಹೋದರ ಮತ್ತು ಅಧ್ಯಕ್ಷ ಗೋಟಬಯಾ ರಾಜಪಕ್ಸೆ ನೇತೃತ್ವದ ಶ್ರೀಲಂಕಾ ಪೀಪಲ್ಸ್ ಪಾರ್ಟಿ (ಎಸ್ಎಲ್ಪಿಪಿ) ಭರ್ಜರಿ ಜಯ ದಾಖಲಿಸಿತ್ತು. ಒಟ್ಟು 225 ಸದಸ್ಯರ ಸಂಸತ್ತಿನಲ್ಲಿ 150 ಸ್ಥಾನಗಳನ್ನುಗಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ: </strong>ಶ್ರೀಲಂಕಾದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ರಾಜಪಕ್ಸೆ ಸಹೋದರರ ನೇತೃತ್ವ ಸರ್ಕಾರದ ಮೊದಲ ಸಂಸತ್ತಿನ ಅಧಿವೇಶನ ಆಗಸ್ಟ್ 20ರಂದು ನಡೆಯಲಿದೆ.</p>.<p>’ಕೋವಿಡ್ 19’ ಸೋಂಕು ನಿಯಂತ್ರಣ ’ಶಿಷ್ಟಾಚಾರ’ಗಳೊಂದಿಗೆ ಸಂಸತ್ತಿನ ಮೊದಲ ಅಧಿವೇಶನಕ್ಕೆ ಬೇಕಾದ ಸಿದ್ಧತೆಗಳನ್ನು ನಡೆಸುತ್ತಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸದ್ಯ ಶ್ರೀಲಂಕಾದಲ್ಲಿ 2844 ಸೋಂಕಿತ ಪ್ರಕರಣಗಳಿವೆ. 2579 ಮಂದಿ ಗುಣಮುಖರಾಗಿದ್ದಾರೆ. 11 ಮಂದಿ ಸಾವನ್ನಪ್ಪಿದ್ದಾರೆ.</p>.<p>’ಸಂಸತ್ ಭವನದೊಳಗೆ ಸಂಸದರು ಕುಳಿತುಕೊಳ್ಳುವ ಆಸನಗಳ ನಡುವೆ ಒಂದು ಮೀಟರ್ ಅಂತರ ಕಾಯ್ದುಕೊಂಡಿದ್ದೇವೆ. ಪ್ರತಿಯೊಬ್ಬರಿಗೂ ಮಾಸ್ಕ್ ಧರಿಸಿ ಬರಲು ಸೂಚಿಸಲಾಗಿದೆ. ಈಗಾಗಲೇ ಸಂಸತ್ ಭವನದ ಎಲ್ಲ ಕೊಠಡಿಗಳನ್ನೂ ಸ್ಯಾನಿಟೈಸ್ ಮಾಡಲಾಗಿದೆ’ ಎಂದುಸಂಸತ್ತಿನ ಸಾರ್ಜೆಂಟ್-ಅಟ್-ಆರ್ಮ್ಸ್ ನರೇಂದ್ರ ಫರ್ನಾಂಡೊ ತಿಳಿಸಿದ್ದಾರೆ.</p>.<p>ಆಗಸ್ಟ್ 5 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಅವರ ಕಿರಿಯ ಸಹೋದರ ಮತ್ತು ಅಧ್ಯಕ್ಷ ಗೋಟಬಯಾ ರಾಜಪಕ್ಸೆ ನೇತೃತ್ವದ ಶ್ರೀಲಂಕಾ ಪೀಪಲ್ಸ್ ಪಾರ್ಟಿ (ಎಸ್ಎಲ್ಪಿಪಿ) ಭರ್ಜರಿ ಜಯ ದಾಖಲಿಸಿತ್ತು. ಒಟ್ಟು 225 ಸದಸ್ಯರ ಸಂಸತ್ತಿನಲ್ಲಿ 150 ಸ್ಥಾನಗಳನ್ನುಗಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>