ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ: ಗೊಟಬಯ ಸಿಂಗಪುರದಿಂದ ಥಾಯ್ಲೆಂಡ್‌ಗೆ?

Last Updated 10 ಆಗಸ್ಟ್ 2022, 11:19 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದ ಪದಚ್ಯುತ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ತಾತ್ಕಾಲಿಕ ಆಶ್ರಯ ಬಯಸಿ ಗುರುವಾರ ಥಾಯ್ಲೆಂಡ್‌ ರಾಜಧಾನಿ ಬ್ಯಾಂಕಾಕ್‌ಗೆ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಈ ಬಗ್ಗೆ ಶ್ರೀಲಂಕಾ ವಿದೇಶಾಂಗ ಸಚಿವಾಲಯ ಯಾವುದೇ ಮಾಹಿತಿ ನೀಡಿಲ್ಲ. ದೇಶದ ಆರ್ಥಿಕ ಬಿಕ್ಕಟ್ಟಿಗೆ ಗೊಟಬಯ ರಾಜಪಕ್ಸ ಅವರೇ ಕಾರಣ ಎಂದು ಜನರು ದಂಗೆ ಎದ್ದ ನಂತರ ಗೊಟಬಯ ಅವರು ದೇಶಬಿಟ್ಟು ಮಾಲ್ಡೀವ್ಸ್‌ಗೆ ತೆರಳಿದ್ದರು. ಅಲ್ಲಿಂದ ಜುಲೈ 14ರಂದು ಸಿಂಗಪುರಕ್ಕೆ ತೆರಳಿದ್ದರು.

ಪ್ರತಿಭಟನೆ ಅಂತ್ಯ:

ಶ್ರೀಲಂಕಾ ಸರ್ಕಾರದ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯು 123 ದಿನಗಳ ಬಳಿಕ ಮಂಗಳವಾರ ಅಂತ್ಯಗೊಂಡಿದೆ. ಪ್ರತಿಭಟನಕಾರರುಗಾಲೆಫೇಸ್ ಪ್ರೊಮೆನೇಡ್‌ನಿಂದ ತೆರಳಿದ್ದಾರೆ. ಏಪ್ರಿಲ್‌ 9ರಿಂದ ‘ರಾಜಪಕ್ಸ ಮನೆಗೆ ಹೋಗಿ’ ಎಂದು ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

‘ಗಾಲೆ ಫೇಸ್‌ ಸ್ಥಳದಿಂದ ನಿರ್ಗಮಿಸಲು ನಿರ್ಧರಿಸಿದ್ದೇವೆ. ಆದರೆ ನಮ್ಮ ಹೋರಾಟ ನಿಲ್ಲಿಸಿದ್ದೇವೆ ಎಂದರ್ಥವಲ್ಲ. ವ್ಯವಸ್ಥೆಯ ಬದಲಾವಣೆಗೆ ಆಗ್ರಹಿಸಿ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ಸರ್ಕಾರಿ ವಿರೋಧಿ ಪ್ರತಿಭಟನೆಯ ಗುಂಪಿನ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT