‘ಪ್ರಧಾನಿ ಮಹಿಂದಾ ರಾಜಪಕ್ಸ ಅವರನ್ನು ಬದಲಿಸಿ ನೂತನ ಪ್ರಧಾನಿಯನ್ನು ಆಯ್ಕೆ ಮಾಡಬೇಕು, ಪ್ರಮುಖ ನಿರ್ಧಾರ ಕೈಗೊಳ್ಳುವುದಕ್ಕಾಗಿ ಎಲ್ಲ ಪಕ್ಷಗಳನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕು, ಕನಿಷ್ಠ ಸಂಖ್ಯೆಯಲ್ಲಿ ಸಂಪುಟ ಸಚಿವರು ಇರಬೇಕು’ ಎಂಬ ಪ್ರಸ್ತಾವವನ್ನು ಮುಂದಿಡಲಾಗಿದೆ ಎಂದು ಜಾತಿಕಾ ಹೆಳ ಉರುಮಾಯ ಪಕ್ಷದ ಅಧ್ಯಕ್ಷ ಉದಯ ಗಮನ್ಪಿಲ ಹೇಳಿದ್ದಾರೆ.