1987ರ ಭಾರತ–ಲಂಕಾ ಒಪ್ಪಂದದ ಮೇರೆಗೆ 13ನೇ ತಿದ್ದುಪಡಿಯನ್ನು ಮಾಡಲಾಗಿತ್ತು. ಇದು ಶ್ರೀಲಂಕಾದಲ್ಲಿ ತಮಿಳು ಸಮುದಾಯದವರಿಗೆ ಅಧಿಕಾರವನ್ನು ಒದಗಿಸುತ್ತದೆ. ಇದನ್ನು ಪೂರ್ತಿಯಾಗಿ ಜಾರಿಗೆ ತರಬೇಕು ಹಾಗೂ ಶೀಘ್ರ ಪ್ರಾಂತೀಯ ಮಂಡಳಿ ಚುನಾವಣೆ ನಡೆಸಬೇಕು ಎಂಬುದು ತಮಿಳರ ಆಗ್ರಹವಾಗಿದೆ. ಆದರೆ ಆಡಳಿತಾರೂಢ ಶ್ರೀಲಂಕಾ ಪೀಪಲ್ಸ್ ಪಾರ್ಟಿಯ ಬಹುಸಂಖ್ಯಾತ ಸಿಂಹಳ ಜನಪ್ರತಿನಿಧಿಗಳು ಶ್ರೀಲಂಕಾದ ಪ್ರಾಂತೀಯ ಮಂಡಳಿ ವ್ಯವಸ್ಥೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.