<p>ಕಾಬೂಲ್: ಯಾವುದೇ ದೇಶದ ವಿರುದ್ಧಪ್ರತೀಕಾರ ತೀರಿಸಿಕೊಳ್ಳಲು ಮುಂದಾಗುವುದಿಲ್ಲ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ.</p>.<p>ಮಂಗಳವಾರ ತಡರಾತ್ರಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.</p>.<p>ಹಿಂದಿನ ಸರ್ಕಾರದ ಜತೆ ಕೆಲಸ ಮಾಡಿದವರ ಮತ್ತು ವಿದೇಶಿ ಸರ್ಕಾರಗಳು ಅಥವಾ ಪಡೆಗಳ ಜತೆ ಕೆಲಸ ಮಾಡಿದವರ ಮೇಲೆ ಸೇಡು ತೀರಿಸಿಕೊಳ್ಳುವುದಿಲ್ಲ, ಇಸ್ಲಾಮಿಕ್ ಕಾನೂನಿನ ವ್ಯಾಪ್ತಿಯಲ್ಲಿ ಮಹಿಳೆಯರು ಕೂಡ ಸರ್ಕಾರದಲ್ಲಿ ಭಾಗಿಯಾಗಬಹುದು ಎಂದು ಮುಜಾಹಿದ್ ಹೇಳಿದ್ದಾರೆ.</p>.<p>ನಾವು ಅಫ್ಗನ್ ಜನರಿಗೆ ಸಂಪೂರ್ಣವಾಗಿ ಕ್ಷಮಾದಾನ ನೀಡಿದ್ದೇವೆ, ಸರ್ಕಾರ ರಚನೆಯ ಕುರಿತು ಮಾತುಕತೆಗಳು ನಡೆಯುತ್ತಿದ್ದು ಇಸ್ಲಾಮಿಕ್ ಸರ್ಕಾರ ರಚನೆಯಾಗಲಿದೆ ಎಂದು ಅವರು ಹೇಳಿದ್ದಾರೆ.</p>.<p>ಇಲ್ಲಿ ಖಾಸಗಿ ಮಾಧ್ಯಮಗಳು ಸ್ವತಂತ್ರವಾಗಿ ಕೆಲಸ ಮಾಡಬೇಕು, ದೇಶದ ಹಿತಾಸಕ್ತಿಗೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದ್ದಾರೆ</p>.<p>ಹಿಂದಿನ ತಲೆಮಾರಿನ ಜನರು ತಾಲಿಬಾನ್ನ ಕ್ರೂರ ಆಡಳಿತ ಅನುಭವಿಸಿರುವುದು ಜನರ ಭೀತಿಗೆ ಕಾರಣವಾಗಿದೆ. ಹಾಗೇ ಅಂತರರಾಷ್ಟ್ರೀಯ ಸಮುದಾಯಗಳು ಕೂಡ ತಾಲಿಬಾನ್ ನಡೆಯನ್ನು ಅನುಮಾನದಿಂದ ನೋಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಬೂಲ್: ಯಾವುದೇ ದೇಶದ ವಿರುದ್ಧಪ್ರತೀಕಾರ ತೀರಿಸಿಕೊಳ್ಳಲು ಮುಂದಾಗುವುದಿಲ್ಲ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ.</p>.<p>ಮಂಗಳವಾರ ತಡರಾತ್ರಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.</p>.<p>ಹಿಂದಿನ ಸರ್ಕಾರದ ಜತೆ ಕೆಲಸ ಮಾಡಿದವರ ಮತ್ತು ವಿದೇಶಿ ಸರ್ಕಾರಗಳು ಅಥವಾ ಪಡೆಗಳ ಜತೆ ಕೆಲಸ ಮಾಡಿದವರ ಮೇಲೆ ಸೇಡು ತೀರಿಸಿಕೊಳ್ಳುವುದಿಲ್ಲ, ಇಸ್ಲಾಮಿಕ್ ಕಾನೂನಿನ ವ್ಯಾಪ್ತಿಯಲ್ಲಿ ಮಹಿಳೆಯರು ಕೂಡ ಸರ್ಕಾರದಲ್ಲಿ ಭಾಗಿಯಾಗಬಹುದು ಎಂದು ಮುಜಾಹಿದ್ ಹೇಳಿದ್ದಾರೆ.</p>.<p>ನಾವು ಅಫ್ಗನ್ ಜನರಿಗೆ ಸಂಪೂರ್ಣವಾಗಿ ಕ್ಷಮಾದಾನ ನೀಡಿದ್ದೇವೆ, ಸರ್ಕಾರ ರಚನೆಯ ಕುರಿತು ಮಾತುಕತೆಗಳು ನಡೆಯುತ್ತಿದ್ದು ಇಸ್ಲಾಮಿಕ್ ಸರ್ಕಾರ ರಚನೆಯಾಗಲಿದೆ ಎಂದು ಅವರು ಹೇಳಿದ್ದಾರೆ.</p>.<p>ಇಲ್ಲಿ ಖಾಸಗಿ ಮಾಧ್ಯಮಗಳು ಸ್ವತಂತ್ರವಾಗಿ ಕೆಲಸ ಮಾಡಬೇಕು, ದೇಶದ ಹಿತಾಸಕ್ತಿಗೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದ್ದಾರೆ</p>.<p>ಹಿಂದಿನ ತಲೆಮಾರಿನ ಜನರು ತಾಲಿಬಾನ್ನ ಕ್ರೂರ ಆಡಳಿತ ಅನುಭವಿಸಿರುವುದು ಜನರ ಭೀತಿಗೆ ಕಾರಣವಾಗಿದೆ. ಹಾಗೇ ಅಂತರರಾಷ್ಟ್ರೀಯ ಸಮುದಾಯಗಳು ಕೂಡ ತಾಲಿಬಾನ್ ನಡೆಯನ್ನು ಅನುಮಾನದಿಂದ ನೋಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>