ವಿಶ್ವಸಂಸ್ಥೆಯ 'ಅಂತರಾಷ್ಟ್ರೀಯ ಭಯೋತ್ಪಾದನೆ ನಿವಾರಣೆಗೆ ಕ್ರಮಗಳು' ಕುರಿತು ನಡೆದ 6ನೇ ಕಾನೂನು ಸಮಿತಿಯ ಸಭೆಯಲ್ಲಿ ಮಾತನಾಡಿದ ಭಟ್,‘ಎಲ್ಲ ಹಂತಗಳಲ್ಲೂ, ವಿಭಾಗಗಳಲ್ಲೂ ಭಯೋತ್ಪಾದನೆಯ ವಿರುದ್ಧದ ಹೋರಾಟ ನಿರಂತರವಾಗಿ ನಡೆಯಬೇಕು‘ ಎಂದು ಪ್ರತಿಪಾದಿಸಿದರು. ಹಾಗೆಯೇ ‘ಈ ಹೋರಾಟಕ್ಕೆ ಸಂಬಂಧಿಸಿದಂತೆ ಎಲ್ಲಾ ಸದಸ್ಯ ರಾಷ್ಟ್ರಗಳು ಅಂತರರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಸಮಾವೇಶಗಳಲ್ಲಿ, ಭಯೋತ್ಪಾದನೆ ನಿಗ್ರಹ ಕುರಿತು ತಮ್ಮಲ್ಲಿರುವ ವಿಚಾರಗಳನ್ನು ಪ್ರಸ್ತುತಪಡಿಸಬೇಕು‘ ಎಂದು ಹೇಳಿದರು.