<p><strong>ವಿಶ್ವಸಂಸ್ಥೆ:</strong> ‘ಹಲವು ದಶಕಗಳಿಂದ ಗಡಿಯುದ್ದಕ್ಕೂ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಭಾರತ ಬಲಿಪಶುವಾಗಿದೆ. ಇಂಥ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾ, ಉಗ್ರರಿಗೆ ಆಶ್ರಯ ನೀಡುವ ಮೂಲಕ ಕೆಲವು ದೇಶಗಳು ತಪ್ಪಿತಸ್ಥ ಸ್ಥಾನದಲ್ಲಿವೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತವು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಚಾಟಿ ಬೀಸಿದೆ.</p>.<p>ಕೋವಿಡ್ ನಂತರದ ಸನ್ನಿವೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನಿಗ್ರಹಿಸುವ ಕುರಿತು ವರ್ಚುವಲ್ ಆಗಿ ನಡೆಯುತ್ತಿರುವ ‘ಭಯೋತ್ಪಾದನಾ ನಿಗ್ರಹ ಸಪ್ತಾಹ‘ದಲ್ಲಿ ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಟಿ.ಎಸ್. ತಿರುಮೂರ್ತಿ ಅವರು ಪಾಕಿಸ್ತಾನದ ಹೆಸರು ಹೇಳದೇ, ಹೀಗೆ ಆರೋಪಿಸಿದ್ದಾರೆ.</p>.<p>ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ದೊರೆಯುತ್ತಿರುವ ಕಾರಣದಿಂದಲೇ ಹಲವು ವರ್ಷಗಳಿಂದ ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತ ಬಲಿಪಶುವಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಕೆಲವು ದೇಶಗಳಿಗೆ, ಭಯೋತ್ಪಾದಕ ಚಟುವಟಿಕೆಗಳಿಗೆ ದೊರೆಯುತ್ತಿರುವ ಆರ್ಥಿಕ ನೆರವನ್ನು ನಿಗ್ರಹಿಸುವಷ್ಟು ಸಾಮರ್ಥ್ಯ ಇಲ್ಲ. ಅದರ ಜತೆಗೆ ಕಾನೂನು ಹೋರಾಟದ ಕುರಿತು ಮಾಹಿತಿ ಕೊರತೆಯೂ ಇದೆ ಎಂದು ಅವರು ತಿಳಿಸಿದ್ದಾರೆ.</p>.<p>ಇವೆಲ್ಲದರ ನಡುವೆ ಕೆಲವು ರಾಷ್ಟ್ರಗಳು ಉದ್ದೇಶಪೂರ್ವಕವಾಗಿಯೇ ಭಯೋತ್ಪಾದನಾ ಚಟುವಟಿಕೆಗಳನ್ನು ಉತ್ತೇಜಿಸುತ್ತಾ, ಭಯೋತ್ಪಾದಕ ಸಂಘಟನೆಗಳಿಗೆ ಆರ್ಥಿಕ ನೆರವು, ಆಶ್ರಯ ನೀಡುತ್ತಾ, ತಪ್ಪಿತಸ್ಥ ಸ್ಥಾನದಲ್ಲಿವೆ ಎಂದು ತಿರುಮೂರ್ತಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ನಾವು ನಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ನೀಡುವ, ಆರ್ಥಿಕ ನೆರವು ನೀಡುವ ರಾಷ್ಟ್ರಗಳನ್ನು ಗುರುತಿಸಿ, ಅವುಗಳನ್ನು ಉತ್ತರದಾಯಿಗಳನ್ನಾಗಿ ಮಾಡುವ ಕೆಲಸವನ್ನುಅಂತರರಾಷ್ಟ್ರೀಯ ಸಮುದಾಯಗಳು ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ‘ಹಲವು ದಶಕಗಳಿಂದ ಗಡಿಯುದ್ದಕ್ಕೂ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಭಾರತ ಬಲಿಪಶುವಾಗಿದೆ. ಇಂಥ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾ, ಉಗ್ರರಿಗೆ ಆಶ್ರಯ ನೀಡುವ ಮೂಲಕ ಕೆಲವು ದೇಶಗಳು ತಪ್ಪಿತಸ್ಥ ಸ್ಥಾನದಲ್ಲಿವೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತವು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಚಾಟಿ ಬೀಸಿದೆ.</p>.<p>ಕೋವಿಡ್ ನಂತರದ ಸನ್ನಿವೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನಿಗ್ರಹಿಸುವ ಕುರಿತು ವರ್ಚುವಲ್ ಆಗಿ ನಡೆಯುತ್ತಿರುವ ‘ಭಯೋತ್ಪಾದನಾ ನಿಗ್ರಹ ಸಪ್ತಾಹ‘ದಲ್ಲಿ ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಟಿ.ಎಸ್. ತಿರುಮೂರ್ತಿ ಅವರು ಪಾಕಿಸ್ತಾನದ ಹೆಸರು ಹೇಳದೇ, ಹೀಗೆ ಆರೋಪಿಸಿದ್ದಾರೆ.</p>.<p>ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ದೊರೆಯುತ್ತಿರುವ ಕಾರಣದಿಂದಲೇ ಹಲವು ವರ್ಷಗಳಿಂದ ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತ ಬಲಿಪಶುವಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಕೆಲವು ದೇಶಗಳಿಗೆ, ಭಯೋತ್ಪಾದಕ ಚಟುವಟಿಕೆಗಳಿಗೆ ದೊರೆಯುತ್ತಿರುವ ಆರ್ಥಿಕ ನೆರವನ್ನು ನಿಗ್ರಹಿಸುವಷ್ಟು ಸಾಮರ್ಥ್ಯ ಇಲ್ಲ. ಅದರ ಜತೆಗೆ ಕಾನೂನು ಹೋರಾಟದ ಕುರಿತು ಮಾಹಿತಿ ಕೊರತೆಯೂ ಇದೆ ಎಂದು ಅವರು ತಿಳಿಸಿದ್ದಾರೆ.</p>.<p>ಇವೆಲ್ಲದರ ನಡುವೆ ಕೆಲವು ರಾಷ್ಟ್ರಗಳು ಉದ್ದೇಶಪೂರ್ವಕವಾಗಿಯೇ ಭಯೋತ್ಪಾದನಾ ಚಟುವಟಿಕೆಗಳನ್ನು ಉತ್ತೇಜಿಸುತ್ತಾ, ಭಯೋತ್ಪಾದಕ ಸಂಘಟನೆಗಳಿಗೆ ಆರ್ಥಿಕ ನೆರವು, ಆಶ್ರಯ ನೀಡುತ್ತಾ, ತಪ್ಪಿತಸ್ಥ ಸ್ಥಾನದಲ್ಲಿವೆ ಎಂದು ತಿರುಮೂರ್ತಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ನಾವು ನಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ನೀಡುವ, ಆರ್ಥಿಕ ನೆರವು ನೀಡುವ ರಾಷ್ಟ್ರಗಳನ್ನು ಗುರುತಿಸಿ, ಅವುಗಳನ್ನು ಉತ್ತರದಾಯಿಗಳನ್ನಾಗಿ ಮಾಡುವ ಕೆಲಸವನ್ನುಅಂತರರಾಷ್ಟ್ರೀಯ ಸಮುದಾಯಗಳು ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>