ಬಂದಾರ್ ಪ್ರದೇಶದಲ್ಲಿರುವ ಎ.ಆರ್. ಮಾರುಕಟ್ಟೆಯ ದಿನಸಿ ಅಂಗಡಿಯೊಂದಕ್ಕೆ ಗುರುವಾರ ರಾತ್ರಿ ನುಗ್ಗಿದ 40 ವರ್ಷದ ಕಳ್ಳ, ಹೊರಗೆ ಬರಲಾರದೆ ಸಿಲುಕಿಕೊಂಡಿದ್ದಾನೆ. ಮರುದಿನ ಬೆಳಗ್ಗೆ ಜನರು ಅಂಗಡಿ ಬಳಿ ಜಮಾಯಿಸಿದ್ದಾರೆ. ಇನ್ನು ಹೊರಗೆ ಹೋದರೆ, ಜನರು ಹಲ್ಲೆ ನಡೆಸಲಿದ್ದಾರೆ ಎಂಬುದನ್ನು ಅರಿತ ಚಾಲಾಕಿ ಕಳ್ಳ, ನೇರವಾಗಿ ಪೊಲೀಸ್ ಸಹಾಯವಾಣಿ ಸಂಖ್ಯೆಗೆ (999ಕ್ಕೆ) ಕರೆ ಮಾಡಿ ತನ್ನ ಪರಿಸ್ಥಿತಿಯನ್ನು ವಿವರಿಸಿದ್ದಾನೆ. ಸುರಕ್ಷಿತವಾಗಿ ಹೊರಗೆ ಹೋಗಲು ನೆರವಾಗುವಂತೆ ಮನವಿ ಮಾಡಿದ್ದಾನೆ.