<p><strong>ಕೊಲಂಬೊ:</strong> ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟು, ಶ್ರೀಲಂಕಾ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿರುವ ಜನರಿಗೆ ಶ್ರೀಲಂಕಾದ ಹಲವು ಕ್ರಿಕೆಟಿಗರು ಬೆಂಬಲ ಘೋಷಿಸಿದ್ದಾರೆ. ಸರ್ಕಾರದ ನಿಲುವನ್ನು ಕಟುವಾಗಿ ಟೀಕಿಸಿರುವ ಮಾಜಿ ಮತ್ತು ಹಾಲಿ ಕ್ರಿಕೆಟಿಗರು, ಎಲ್ಲಾ ಸಂಸದರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.</p>.<p>ಶ್ರೀಲಂಕಾವು 1948ರಲ್ಲಿ ಬ್ರಿಟನ್ನಿಂದ ಸ್ವಾತಂತ್ರ್ಯ ಪಡೆದ ನಂತರ ಇದೇ ಮೊದಲ ಬಾರಿ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಗುರಿಯಾಗಿದೆ. ಈ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರವು ಕರ್ಫ್ಯೂ ಹೇರಿದೆ ಮತ್ತು ಜನರನ್ನು ನಿಯಂತ್ರಿಸಲು ಸೇನೆಯನ್ನು ನಿಯೋಜಿಸಿದೆ. ಹೀಗಿದ್ದೂ ಜನರು ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸಿದ್ದಾರೆ.</p>.<p>ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಆಗಿರುವ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲ ಜಯವರ್ಧನೆ ಅವರು, ‘ನಿಜವಾದ ನಾಯಕರು ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳುತ್ತಾರೆ.<br />ಸಂಕಷ್ಟವನ್ನು ಅನುಭವಿಸುತ್ತಿರುವ ದೇಶದ ಜನರನ್ನು ರಕ್ಷಿಸುವ ತುರ್ತು ಇದೆ. ಸಂಸದರು ರಾಜೀನಾಮೆ ನೀಡಿ, ಹೊಸ ತಂಡಕ್ಕೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಪಂಜಾಬ್ ಕಿಂಗ್ಸ್ ತಂಡದ ಬ್ಯಾಟ್ಸ್ಮನ್ ಆಗಿರುವ ಶ್ರೀಲಂಕಾದ ಭಾನುಕಾ ರಾಜಪಕ್ಸೆ ಅವರು, ‘ನಮ್ಮ ನೆಲದಿಂದ ಸಾವಿರಾರು ಮೈಲಿ ದೂರದಲ್ಲಿದ್ದರೂ, ನಮ್ಮ ಜನರು ದಿನೇ ದಿನೇ ಅನುಭವಿಸುತ್ತಿರುವ ನೋವು ನಮಗೆ ಗೊತ್ತಾಗುತ್ತಿದೆ. ನಮ್ಮ ಜನರ ಆಕ್ರೋಶ ಗೊತ್ತಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ ಅವರ ಪತ್ನಿ ಯಾಹೆಲಿ ಅವರು ಕೊಲಂಬೊದಲ್ಲಿನ ಇಂಡಿಪೆಂಡೆನ್ಸ್ ಸ್ಕ್ವೇರ್ನಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ‘ದೇಶದ ಇಂದಿನ ಆರ್ಥಿಕ ಬಿಕ್ಕಟ್ಟಿಗೆ 225 ಸಂಸದರೇ ಕಾರಣ. ದೇಶದ ಯುವಜನರ ಭವಿಷ್ಯವನ್ನು ಈ ಸಂಸದರು ಧ್ವಂಸ ಮಾಡಿದ್ದಾರೆ. ಯುವಜನರ ಪರವಾಗಿ ಹೋರಾಟ ನಡೆಸಲು ಇಲ್ಲಿಗೆ ಬಂದಿದ್ದೇನೆ’ ಎಂದು ಅವರು ಹೇಳಿದ್ದಾರೆ.</p>.<p>ಕುಮಾರ ಸಂಗಕ್ಕಾರ ಅವರೂ ಹೋರಾಟವನ್ನು ಬೆಂಬಲಿಸಿದ್ದಾರೆ. ‘ಪ್ರತಿದಿನವೂ ಜನರು ಪಡುತ್ತಿರುವ ಕಷ್ಟವನ್ನು ನೋಡಿದರೆ, ಹೃದಯ ಒಡೆದುಹೋಗುತ್ತದೆ. ಆದರೆ ಜನರ ಆಕ್ರೋಶಕ್ಕೆ, ಕೆಲವರು ಸಿಟ್ಟಿನಿಂದ ಪ್ರತಿಕ್ರಿಯಿಸುತ್ತಿದ್ದಾರೆ. ಇನ್ನೂ ಕೆಲವರು ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p><strong>ಕೇಂದ್ರೀಯ ಬ್ಯಾಂಕ್ ಗವರ್ನರ್ ರಾಜೀನಾಮೆ</strong></p>.<p>ಶ್ರೀಲಂಕಾದ ಕೇಂದ್ರೀಯ ಬ್ಯಾಂಕ್ನ ಗವರ್ನರ್ ಅಜಿತ್ ನಿವಾರ್ಡ್ ಕಬ್ರಾಲ್ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು.ಆರ್ಥಿಕ ಬಿಕ್ಕಟ್ಟಿನ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ತೀವ್ರವಾದ ನಡುವೆಯೇ ಈ ಬೆಳವಣಿಗೆ ನಡೆದಿದೆ.</p>.<p>ಅಧ್ಯಕ್ಷ ಗೊಟಬಯ ರಾಜಪಕ್ಸ ಮತ್ತು ಪ್ರಧಾನಿ ಮಹಿಂದ ರಾಜಪಕ್ಸ ಹೊರತಾಗಿಶ್ರೀಲಂಕಾ ಸಂಪುಟದ ಎಲ್ಲಾ ಸದಸ್ಯರು ತಮ್ಮ ಸ್ಥಾನಗಳಿಗೆ ಭಾನುವಾರ ರಾಜೀನಾಮೆ ನೀಡಿದ ಬೆನ್ನಲ್ಲೇ ಅಜಿತ್ ಅವರೂ ರಾಜೀನಾಮೆ ನೀಡಿದ್ದಾರೆ.</p>.<p>ಟ್ವೀಟ್ ಮೂಲಕ ಕಾಬ್ರಾಲ್ ಅವರು ರಾಜೀನಾಮೆಯನ್ನು ಘೋಷಿಸಿದ್ದಾರೆ.‘ಸಂಪುಟದ ಎಲ್ಲಾ ಸಚಿವರು ರಾಜಿನಾಮೆ ನೀಡುತ್ತಿರುವ ಸಂದರ್ಭದಲ್ಲಿ, ಶ್ರೀಲಂಕಾದ ಕೇಂದ್ರೀಯ ಬ್ಯಾಂಕ್ ಗವರ್ನರ್ ಹುದ್ದೆಗೆ ರಾಜೀನಾಮೆಯನ್ನು ಅಧ್ಯಕ್ಷ ಗೊಟಬಯ ರಾಜಪಕ್ಸ ಅವರಿಗೆ ಸಲ್ಲಿಸಿದ್ದೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.ಏಳು ತಿಂಗಳ ಹಿಂದಷ್ಟೇ ಅವರು ಈ ಹುದ್ದೆಗೇರಿದ್ದರು.</p>.<p>ಮಾಜಿ ಹಣಕಾಸು ಸಚಿವರೂ ಆಗಿರುವ ಕಬ್ರಾಲ್ ಅವರು 2006ರಿಂದ 2015ರ ಅವಧಿಗೆ ಗವರ್ನರ್ ಆಗಿದ್ದರು. 2021ರಲ್ಲಿ ಎರಡನೇ ಬಾರಿಗೆ ಗವರ್ನರ್ ಹುದ್ದೆಗೇರಿದ್ದರು. ಈ ಅವಧಿಯಲ್ಲಿ ಅವರು, ವಿದೇಶಿ ಸಾಲದ ಮೇಲೆ ಶ್ರೀಲಂಕಾಕ್ಕೆ ಇರುವ ಅವಲಂಬನೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿದ್ದರು ಮತ್ತು ಶ್ರೀಲಂಕಾದ ಆರ್ಥಿಕತೆ ಕುಸಿತದ ನಡುವೆಯೂ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ (ಐಎಂಎಫ್) ಆರ್ಥಿಕ ನೆರವು ಪಡೆಯಲು ನಿರಾಕರಿಸಿದ್ದರು.</p>.<p>***</p>.<p>ಈ ದೇಶದ ಆರ್ಥಿಕತೆಯನ್ನು ನಿಯಂತ್ರಿಸುತ್ತಿರುವ ಕೆಲವೇ ಮಂದಿ, ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಅಂತಹವರು ಅಧಿಕಾರದಿಂದ ಕೆಳಗಿಳಿಯಬೇಕು.</p>.<p><strong>– ಮಹೇಲಾ ಜಯವರ್ಧನೆ, ಶ್ರೀಲಂಕಾ ಟೆಸ್ಟ್ ಕ್ರಿಕೆಟ್ ತಂಡದ ಮಾಜಿ ನಾಯಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟು, ಶ್ರೀಲಂಕಾ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿರುವ ಜನರಿಗೆ ಶ್ರೀಲಂಕಾದ ಹಲವು ಕ್ರಿಕೆಟಿಗರು ಬೆಂಬಲ ಘೋಷಿಸಿದ್ದಾರೆ. ಸರ್ಕಾರದ ನಿಲುವನ್ನು ಕಟುವಾಗಿ ಟೀಕಿಸಿರುವ ಮಾಜಿ ಮತ್ತು ಹಾಲಿ ಕ್ರಿಕೆಟಿಗರು, ಎಲ್ಲಾ ಸಂಸದರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.</p>.<p>ಶ್ರೀಲಂಕಾವು 1948ರಲ್ಲಿ ಬ್ರಿಟನ್ನಿಂದ ಸ್ವಾತಂತ್ರ್ಯ ಪಡೆದ ನಂತರ ಇದೇ ಮೊದಲ ಬಾರಿ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಗುರಿಯಾಗಿದೆ. ಈ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರವು ಕರ್ಫ್ಯೂ ಹೇರಿದೆ ಮತ್ತು ಜನರನ್ನು ನಿಯಂತ್ರಿಸಲು ಸೇನೆಯನ್ನು ನಿಯೋಜಿಸಿದೆ. ಹೀಗಿದ್ದೂ ಜನರು ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸಿದ್ದಾರೆ.</p>.<p>ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಆಗಿರುವ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲ ಜಯವರ್ಧನೆ ಅವರು, ‘ನಿಜವಾದ ನಾಯಕರು ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳುತ್ತಾರೆ.<br />ಸಂಕಷ್ಟವನ್ನು ಅನುಭವಿಸುತ್ತಿರುವ ದೇಶದ ಜನರನ್ನು ರಕ್ಷಿಸುವ ತುರ್ತು ಇದೆ. ಸಂಸದರು ರಾಜೀನಾಮೆ ನೀಡಿ, ಹೊಸ ತಂಡಕ್ಕೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಪಂಜಾಬ್ ಕಿಂಗ್ಸ್ ತಂಡದ ಬ್ಯಾಟ್ಸ್ಮನ್ ಆಗಿರುವ ಶ್ರೀಲಂಕಾದ ಭಾನುಕಾ ರಾಜಪಕ್ಸೆ ಅವರು, ‘ನಮ್ಮ ನೆಲದಿಂದ ಸಾವಿರಾರು ಮೈಲಿ ದೂರದಲ್ಲಿದ್ದರೂ, ನಮ್ಮ ಜನರು ದಿನೇ ದಿನೇ ಅನುಭವಿಸುತ್ತಿರುವ ನೋವು ನಮಗೆ ಗೊತ್ತಾಗುತ್ತಿದೆ. ನಮ್ಮ ಜನರ ಆಕ್ರೋಶ ಗೊತ್ತಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ ಅವರ ಪತ್ನಿ ಯಾಹೆಲಿ ಅವರು ಕೊಲಂಬೊದಲ್ಲಿನ ಇಂಡಿಪೆಂಡೆನ್ಸ್ ಸ್ಕ್ವೇರ್ನಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ‘ದೇಶದ ಇಂದಿನ ಆರ್ಥಿಕ ಬಿಕ್ಕಟ್ಟಿಗೆ 225 ಸಂಸದರೇ ಕಾರಣ. ದೇಶದ ಯುವಜನರ ಭವಿಷ್ಯವನ್ನು ಈ ಸಂಸದರು ಧ್ವಂಸ ಮಾಡಿದ್ದಾರೆ. ಯುವಜನರ ಪರವಾಗಿ ಹೋರಾಟ ನಡೆಸಲು ಇಲ್ಲಿಗೆ ಬಂದಿದ್ದೇನೆ’ ಎಂದು ಅವರು ಹೇಳಿದ್ದಾರೆ.</p>.<p>ಕುಮಾರ ಸಂಗಕ್ಕಾರ ಅವರೂ ಹೋರಾಟವನ್ನು ಬೆಂಬಲಿಸಿದ್ದಾರೆ. ‘ಪ್ರತಿದಿನವೂ ಜನರು ಪಡುತ್ತಿರುವ ಕಷ್ಟವನ್ನು ನೋಡಿದರೆ, ಹೃದಯ ಒಡೆದುಹೋಗುತ್ತದೆ. ಆದರೆ ಜನರ ಆಕ್ರೋಶಕ್ಕೆ, ಕೆಲವರು ಸಿಟ್ಟಿನಿಂದ ಪ್ರತಿಕ್ರಿಯಿಸುತ್ತಿದ್ದಾರೆ. ಇನ್ನೂ ಕೆಲವರು ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p><strong>ಕೇಂದ್ರೀಯ ಬ್ಯಾಂಕ್ ಗವರ್ನರ್ ರಾಜೀನಾಮೆ</strong></p>.<p>ಶ್ರೀಲಂಕಾದ ಕೇಂದ್ರೀಯ ಬ್ಯಾಂಕ್ನ ಗವರ್ನರ್ ಅಜಿತ್ ನಿವಾರ್ಡ್ ಕಬ್ರಾಲ್ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು.ಆರ್ಥಿಕ ಬಿಕ್ಕಟ್ಟಿನ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ತೀವ್ರವಾದ ನಡುವೆಯೇ ಈ ಬೆಳವಣಿಗೆ ನಡೆದಿದೆ.</p>.<p>ಅಧ್ಯಕ್ಷ ಗೊಟಬಯ ರಾಜಪಕ್ಸ ಮತ್ತು ಪ್ರಧಾನಿ ಮಹಿಂದ ರಾಜಪಕ್ಸ ಹೊರತಾಗಿಶ್ರೀಲಂಕಾ ಸಂಪುಟದ ಎಲ್ಲಾ ಸದಸ್ಯರು ತಮ್ಮ ಸ್ಥಾನಗಳಿಗೆ ಭಾನುವಾರ ರಾಜೀನಾಮೆ ನೀಡಿದ ಬೆನ್ನಲ್ಲೇ ಅಜಿತ್ ಅವರೂ ರಾಜೀನಾಮೆ ನೀಡಿದ್ದಾರೆ.</p>.<p>ಟ್ವೀಟ್ ಮೂಲಕ ಕಾಬ್ರಾಲ್ ಅವರು ರಾಜೀನಾಮೆಯನ್ನು ಘೋಷಿಸಿದ್ದಾರೆ.‘ಸಂಪುಟದ ಎಲ್ಲಾ ಸಚಿವರು ರಾಜಿನಾಮೆ ನೀಡುತ್ತಿರುವ ಸಂದರ್ಭದಲ್ಲಿ, ಶ್ರೀಲಂಕಾದ ಕೇಂದ್ರೀಯ ಬ್ಯಾಂಕ್ ಗವರ್ನರ್ ಹುದ್ದೆಗೆ ರಾಜೀನಾಮೆಯನ್ನು ಅಧ್ಯಕ್ಷ ಗೊಟಬಯ ರಾಜಪಕ್ಸ ಅವರಿಗೆ ಸಲ್ಲಿಸಿದ್ದೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.ಏಳು ತಿಂಗಳ ಹಿಂದಷ್ಟೇ ಅವರು ಈ ಹುದ್ದೆಗೇರಿದ್ದರು.</p>.<p>ಮಾಜಿ ಹಣಕಾಸು ಸಚಿವರೂ ಆಗಿರುವ ಕಬ್ರಾಲ್ ಅವರು 2006ರಿಂದ 2015ರ ಅವಧಿಗೆ ಗವರ್ನರ್ ಆಗಿದ್ದರು. 2021ರಲ್ಲಿ ಎರಡನೇ ಬಾರಿಗೆ ಗವರ್ನರ್ ಹುದ್ದೆಗೇರಿದ್ದರು. ಈ ಅವಧಿಯಲ್ಲಿ ಅವರು, ವಿದೇಶಿ ಸಾಲದ ಮೇಲೆ ಶ್ರೀಲಂಕಾಕ್ಕೆ ಇರುವ ಅವಲಂಬನೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿದ್ದರು ಮತ್ತು ಶ್ರೀಲಂಕಾದ ಆರ್ಥಿಕತೆ ಕುಸಿತದ ನಡುವೆಯೂ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ (ಐಎಂಎಫ್) ಆರ್ಥಿಕ ನೆರವು ಪಡೆಯಲು ನಿರಾಕರಿಸಿದ್ದರು.</p>.<p>***</p>.<p>ಈ ದೇಶದ ಆರ್ಥಿಕತೆಯನ್ನು ನಿಯಂತ್ರಿಸುತ್ತಿರುವ ಕೆಲವೇ ಮಂದಿ, ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಅಂತಹವರು ಅಧಿಕಾರದಿಂದ ಕೆಳಗಿಳಿಯಬೇಕು.</p>.<p><strong>– ಮಹೇಲಾ ಜಯವರ್ಧನೆ, ಶ್ರೀಲಂಕಾ ಟೆಸ್ಟ್ ಕ್ರಿಕೆಟ್ ತಂಡದ ಮಾಜಿ ನಾಯಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>