<p><strong>ಕಾಬೂಲ್:</strong> ಯುದ್ಧ ಪೀಡಿತ ಅಫ್ಗಾನಿಸ್ತಾನದಲ್ಲಿ ಎದುರಾಗಿರುವ ಮಾನವೀಯ ಬಿಕ್ಕಟ್ಟಿನ ಪರಿಹಾರಕ್ಕೆ ವಿಶ್ವದ ರಾಷ್ಟ್ರಗಳು ತಮ್ಮ ರಾಜಕೀಯ ಸಮಸ್ಯೆಯನ್ನೂ ಮೀರಿ ಸಹಾಯ ಹಸ್ತ ಚಾಚಬೇಕು ಎಂದು ತಾಲಿಬಾನ್ ನಾಯಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ.</p>.<p>ಅಫ್ಗಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯು ಗಂಭೀರವಾಗಿದೆ ಎಂದು ತಾಲಿಬಾನ್ನ ಉಪ ಪ್ರಧಾನ ಮಂತ್ರಿ ಮುಲ್ಲಾ ಅಬ್ದುಲ್ ಘನಿ ಬರಾದಾರ್ ಹೇಳಿದ್ದಾರೆ. ಆ ವಿಡಿಯೊವನ್ನು ಸರ್ಕಾರಿ ಸ್ವಾಮ್ಯದ ಮಾಧ್ಯಮ ಸಂಸ್ಥೆ ‘ಆರ್ಟಿಎ’ ಪ್ರಸಾರ ಮಾಡಿದೆ.</p>.<p>‘ಅಪ್ಗಾನಿಸ್ತಾನ ಒಂದು ಕಡೆ ನಿರ್ಬಂಧಗಳನ್ನು ಎದುರಿಸುತ್ತಿದೆ. ಮತ್ತೊಂದೆಡೆ, ಕಳೆದ 20 ವರ್ಷಗಳ ಆಡಳಿತ ದೇಶದಲ್ಲಿ ನಾಗರಿಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಯಾವುದೇ ಮೂಲಸೌಕರ್ಯ ಸೃಷ್ಟಿ ಮಾಡಿಲ್ಲ’ ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ.</p>.<p>‘ದೇಶದ ನಾಗರಿಕರಿಗೆ ಹಣ, ವಸತಿ ಮತ್ತು ಆಹಾರದ ತೀವ್ರ ಅಗತ್ಯವಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ, ಅಫ್ಗನ್ನರಿಗೆ ವಿಶ್ವ ರಾಷ್ಟ್ರಗಳಿಂದ ಮಾನವೀಯ ಸಹಾಯದ ತುರ್ತು ಎದುರಾಗಿದೆ,’ ಮುಲ್ಲಾ ಬರದಾರ್ ಹೇಳಿಕೊಂಡಿದ್ದಾರೆ.</p>.<p>ಆದಾಗ್ಯೂ, ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ತಾಲಿಬಾನ್ ಸರ್ಕಾರ ಸಂಪೂರ್ಣ ಸನ್ನದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. ನಾಗರಿಕರಿಗೆ ಸಹಾಯ ಮಾಡಲು ಸಚಿವಾಲಯಗಳು ಮತ್ತು ಸರ್ಕಾರಿ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದೂ ಅವರು ಹೇಳಿದರು.</p>.<p>ವಾರದ ಹಿಂದೆ, ನೈಸರ್ಗಿಕ ವಿಕೋಪದ ಕಾರಣಕ್ಕಾಗಿ ಅಫ್ಗಾನಿಸ್ತಾನವು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿತ್ತು. ಅಲ್ಲಿ ವಿಪರೀತ ಹಿಮ ಮತ್ತು ಮಳೆ ಸುರಿಯುತ್ತಿದ್ದು, ದೇಶದ ಪ್ರಮುಖ ರಸ್ತೆಗಳು ಬಂದ್ ಆಗಿವೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಬೂಲ್:</strong> ಯುದ್ಧ ಪೀಡಿತ ಅಫ್ಗಾನಿಸ್ತಾನದಲ್ಲಿ ಎದುರಾಗಿರುವ ಮಾನವೀಯ ಬಿಕ್ಕಟ್ಟಿನ ಪರಿಹಾರಕ್ಕೆ ವಿಶ್ವದ ರಾಷ್ಟ್ರಗಳು ತಮ್ಮ ರಾಜಕೀಯ ಸಮಸ್ಯೆಯನ್ನೂ ಮೀರಿ ಸಹಾಯ ಹಸ್ತ ಚಾಚಬೇಕು ಎಂದು ತಾಲಿಬಾನ್ ನಾಯಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ.</p>.<p>ಅಫ್ಗಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯು ಗಂಭೀರವಾಗಿದೆ ಎಂದು ತಾಲಿಬಾನ್ನ ಉಪ ಪ್ರಧಾನ ಮಂತ್ರಿ ಮುಲ್ಲಾ ಅಬ್ದುಲ್ ಘನಿ ಬರಾದಾರ್ ಹೇಳಿದ್ದಾರೆ. ಆ ವಿಡಿಯೊವನ್ನು ಸರ್ಕಾರಿ ಸ್ವಾಮ್ಯದ ಮಾಧ್ಯಮ ಸಂಸ್ಥೆ ‘ಆರ್ಟಿಎ’ ಪ್ರಸಾರ ಮಾಡಿದೆ.</p>.<p>‘ಅಪ್ಗಾನಿಸ್ತಾನ ಒಂದು ಕಡೆ ನಿರ್ಬಂಧಗಳನ್ನು ಎದುರಿಸುತ್ತಿದೆ. ಮತ್ತೊಂದೆಡೆ, ಕಳೆದ 20 ವರ್ಷಗಳ ಆಡಳಿತ ದೇಶದಲ್ಲಿ ನಾಗರಿಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಯಾವುದೇ ಮೂಲಸೌಕರ್ಯ ಸೃಷ್ಟಿ ಮಾಡಿಲ್ಲ’ ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ.</p>.<p>‘ದೇಶದ ನಾಗರಿಕರಿಗೆ ಹಣ, ವಸತಿ ಮತ್ತು ಆಹಾರದ ತೀವ್ರ ಅಗತ್ಯವಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ, ಅಫ್ಗನ್ನರಿಗೆ ವಿಶ್ವ ರಾಷ್ಟ್ರಗಳಿಂದ ಮಾನವೀಯ ಸಹಾಯದ ತುರ್ತು ಎದುರಾಗಿದೆ,’ ಮುಲ್ಲಾ ಬರದಾರ್ ಹೇಳಿಕೊಂಡಿದ್ದಾರೆ.</p>.<p>ಆದಾಗ್ಯೂ, ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ತಾಲಿಬಾನ್ ಸರ್ಕಾರ ಸಂಪೂರ್ಣ ಸನ್ನದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. ನಾಗರಿಕರಿಗೆ ಸಹಾಯ ಮಾಡಲು ಸಚಿವಾಲಯಗಳು ಮತ್ತು ಸರ್ಕಾರಿ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದೂ ಅವರು ಹೇಳಿದರು.</p>.<p>ವಾರದ ಹಿಂದೆ, ನೈಸರ್ಗಿಕ ವಿಕೋಪದ ಕಾರಣಕ್ಕಾಗಿ ಅಫ್ಗಾನಿಸ್ತಾನವು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿತ್ತು. ಅಲ್ಲಿ ವಿಪರೀತ ಹಿಮ ಮತ್ತು ಮಳೆ ಸುರಿಯುತ್ತಿದ್ದು, ದೇಶದ ಪ್ರಮುಖ ರಸ್ತೆಗಳು ಬಂದ್ ಆಗಿವೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>