ಭೂಕಂಪನದಿಂದ ಹಾನಿಗೊಳಗಾದ ಪ್ರದೇಶದ ಅವಶೇಷಗಳಡಿಯಿಂದ ಭಾನುವಾರ ಬೆಳಗ್ಗೆಯೂ ಮಕ್ಕಳನ್ನು ಹೊರ ತರಲಾಗಿದ್ದು, ರಕ್ಷಣಾ ಕಾರ್ಯಕ್ಕೆ ಆಶಾಕಿರಣವಾಗಿ ಪರಿಣಮಿಸಿದೆ. ಪ್ರತಿಕೂಲ ಹವಾಮಾನದ ನಡುವೆಯೂ ಸುಮಾರು 20 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಅವಶೇಷಗಳಡಿಯಲ್ಲಿ ಬದುಕುಳಿದವರ ರಕ್ಷಣೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.