ಮೃತದೇಹವನ್ನು ಶೀಘ್ರವೇ ಭಾರತಕ್ಕೆ ರವಾನಿಸುವ ನಿಟ್ಟಿನಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಭಾರತದ ರಾಯಭಾರಿ ಅಧಿಕಾರಿಗಳು ಮೃತನ ಕುಟುಂಬದ ಜೊತೆ ಸಂಪರ್ಕ ಸಾಧಿಸಿದ್ದು, ಅಗತ್ಯ ನೆರವುಗಳನ್ನು ನೀಡುತ್ತಿದ್ದಾರೆ. ಜೊತೆಗೆ ಗಾಯಗೊಂಡವರ ಮೇಲೆಯೂ ತೀವ್ರ ನಿಗಾ ವಹಿಸಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.