<p><strong>ಮನಿಲಾ: </strong>ಫಿಲಿಪ್ಪೀನ್ಸ್ನ ದಕ್ಷಿಣ ಮನಿಲಾ ಪ್ರಾಂತ್ಯದಲ್ಲಿ ಸೋಮವಾರ ‘ಮೊಲಾವೆ’ ಚಂಡಮಾರುತ ಅಪ್ಪಳಿಸಿದ್ದು, ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.</p>.<p>‘ಮೊಲಾವೆ ಚಂಡಮಾರುತದಿಂದಾಗಿ ಹಲವು ಮನೆಗಳು ಹಾನಿಯಾಗಿವೆ. ಈವರೆಗೂ ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ಬಟಂಗಾಸ್ ಪ್ರಾಂತ್ಯದಲ್ಲಿ ನೌಕೆಯೊಂದು ಮುಳುಗಡೆಯಾಗಿದ್ದು, ಇದರಲ್ಲಿ ಪ್ರಯಾಣಿಸುತ್ತಿದ್ದ ಏಳು ಮಂದಿಯನ್ನು ರಕ್ಷಿಸಲಾಗಿದೆ. ಒಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಚಂಡಮಾರುತವು ಗಂಟೆಗೆ ಸುಮಾರು 125 ಕಿ.ಮೀ. ವೇಗದಲ್ಲಿ ಬೀಸಿದೆ ಎಂದು ಸರ್ಕಾರಿ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.</p>.<p>‘ಈವರೆಗೆ 25,000ಕ್ಕೂ ಹೆಚ್ಚು ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದೆ ಎಂದು ನಾಗರಿಕ ರಕ್ಷಣಾ ಕಚೇರಿ ತಿಳಿಸಿದೆ.</p>.<p>‘ಚಂಡಮಾರುತದಿಂದಾಗಿ ಏಕಾಏಕಿ ಗಾಳಿ ಬೀಸುತ್ತಿದೆ. ಇದರಿಂದಾಗಿ ಮನೆಗಳ ಮೇಲ್ಫಾವಣಿಗಳು ಹಾರಿ ಹೋಗಿವೆ. ಹಾಗಾಗಿ ನಮ್ಮನ್ನು ಇಲ್ಲಿಂದ ರಕ್ಷಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದರು’ ಎಂದು ಓರಿಯಂಟಲ್ ಮಿಂಡೊರೊ ಪ್ರಾಂತ್ಯದ ಗರ್ವನರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮನಿಲಾ: </strong>ಫಿಲಿಪ್ಪೀನ್ಸ್ನ ದಕ್ಷಿಣ ಮನಿಲಾ ಪ್ರಾಂತ್ಯದಲ್ಲಿ ಸೋಮವಾರ ‘ಮೊಲಾವೆ’ ಚಂಡಮಾರುತ ಅಪ್ಪಳಿಸಿದ್ದು, ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.</p>.<p>‘ಮೊಲಾವೆ ಚಂಡಮಾರುತದಿಂದಾಗಿ ಹಲವು ಮನೆಗಳು ಹಾನಿಯಾಗಿವೆ. ಈವರೆಗೂ ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ಬಟಂಗಾಸ್ ಪ್ರಾಂತ್ಯದಲ್ಲಿ ನೌಕೆಯೊಂದು ಮುಳುಗಡೆಯಾಗಿದ್ದು, ಇದರಲ್ಲಿ ಪ್ರಯಾಣಿಸುತ್ತಿದ್ದ ಏಳು ಮಂದಿಯನ್ನು ರಕ್ಷಿಸಲಾಗಿದೆ. ಒಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಚಂಡಮಾರುತವು ಗಂಟೆಗೆ ಸುಮಾರು 125 ಕಿ.ಮೀ. ವೇಗದಲ್ಲಿ ಬೀಸಿದೆ ಎಂದು ಸರ್ಕಾರಿ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.</p>.<p>‘ಈವರೆಗೆ 25,000ಕ್ಕೂ ಹೆಚ್ಚು ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದೆ ಎಂದು ನಾಗರಿಕ ರಕ್ಷಣಾ ಕಚೇರಿ ತಿಳಿಸಿದೆ.</p>.<p>‘ಚಂಡಮಾರುತದಿಂದಾಗಿ ಏಕಾಏಕಿ ಗಾಳಿ ಬೀಸುತ್ತಿದೆ. ಇದರಿಂದಾಗಿ ಮನೆಗಳ ಮೇಲ್ಫಾವಣಿಗಳು ಹಾರಿ ಹೋಗಿವೆ. ಹಾಗಾಗಿ ನಮ್ಮನ್ನು ಇಲ್ಲಿಂದ ರಕ್ಷಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದರು’ ಎಂದು ಓರಿಯಂಟಲ್ ಮಿಂಡೊರೊ ಪ್ರಾಂತ್ಯದ ಗರ್ವನರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>