<p>ದುಬೈ: ಅಫ್ಗಾನಿಸ್ತಾನದಿಂದ ಪಲಾಯನ ಮಾಡಿದ್ದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ದುಬೈನಲ್ಲಿ ಪತ್ತೆಯಾಗಿದ್ದಾರೆ. ತಾಲಿಬಾನ್ ಆಕ್ರಮಣದ ಬಳಿಕ ಓಡಿ ಬಂದ ಅಶ್ರಫ್ ಘನಿ ಅವರಿಗೆ ಮಾನವೀಯತೆ ಆಧಾರದ ಮೇಲೆ ಆಶ್ರಯ ನೀಡಿರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಹೇಳಿದೆ.<br /><br />‘ಯುಎಇ ವಿದೇಶಾಂಗ ವ್ಯವಹಾರಗಳು ಮತ್ತು ಅಂತರರಾಷ್ಟ್ರೀಯ ಸಹಕಾರ ಸಚಿವಾಲಯವು, ಮಾನವೀಯತೆಯ ಆಧಾರದ ಮೇಲೆ ಅಫ್ಗಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಮತ್ತು ಅವರ ಕುಟುಂಬವನ್ನು ದೇಶಕ್ಕೆ ಸ್ವಾಗತಿಸಿರುವುದಾಗಿ ದೃಢೀಕರಿಸುತ್ತೇವೆ’ ಎಂದು ಯುಎಇ ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಭಾನುವಾರ, ತಾಲಿಬಾನ್ ಉಗ್ರರು ಕಾಬೂಲ್ ನಗರವನ್ನು ಆಕ್ರಮಿಸಲು ಬರುತ್ತಿದ್ದಂತೆ ಅಶ್ರಫ್ ಘನಿ ಅವರು ಅಫ್ಗಾನಿಸ್ತಾನದಿಂದ ಕುಟುಂಬದ ಜೊತೆ ಪಲಾಯನ ಮಾಡಿದ್ದರು.</p>.<p>‘ತಾಲಿಬಾನಿಗಳು ಗೆದ್ದಿದ್ದಾರೆ. ರಕ್ತಪಾತ’ವನ್ನು ತಪ್ಪಿಸಲು ದೇಶ ಬಿಟ್ಟು ಹೋಗುತ್ತಿರುವುದಾಗಿ ಅಶ್ರಫ್ ಘನಿ ಫೇಸ್ಬುಕ್ ಪೋಸ್ಟ್ನಲ್ಲಿ ಹೇಳಿದ್ದರು.</p>.<p>ಬುಧವಾರದವರೆಗೂ ಅವರು ಎಲ್ಲಿದ್ದಾರೆ ಎಂಬುದು ತಿಳಿದಿರಲಿಲ್ಲ, ಉಜ್ಬೆಕಿಸ್ತಾನ್ ಅಥವಾ ಒಮನ್ಗೆ ಪಲಾಯನ ಮಾಡಿರಬಹುದು ಎಂದು ಊಹಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದುಬೈ: ಅಫ್ಗಾನಿಸ್ತಾನದಿಂದ ಪಲಾಯನ ಮಾಡಿದ್ದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ದುಬೈನಲ್ಲಿ ಪತ್ತೆಯಾಗಿದ್ದಾರೆ. ತಾಲಿಬಾನ್ ಆಕ್ರಮಣದ ಬಳಿಕ ಓಡಿ ಬಂದ ಅಶ್ರಫ್ ಘನಿ ಅವರಿಗೆ ಮಾನವೀಯತೆ ಆಧಾರದ ಮೇಲೆ ಆಶ್ರಯ ನೀಡಿರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಹೇಳಿದೆ.<br /><br />‘ಯುಎಇ ವಿದೇಶಾಂಗ ವ್ಯವಹಾರಗಳು ಮತ್ತು ಅಂತರರಾಷ್ಟ್ರೀಯ ಸಹಕಾರ ಸಚಿವಾಲಯವು, ಮಾನವೀಯತೆಯ ಆಧಾರದ ಮೇಲೆ ಅಫ್ಗಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಮತ್ತು ಅವರ ಕುಟುಂಬವನ್ನು ದೇಶಕ್ಕೆ ಸ್ವಾಗತಿಸಿರುವುದಾಗಿ ದೃಢೀಕರಿಸುತ್ತೇವೆ’ ಎಂದು ಯುಎಇ ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಭಾನುವಾರ, ತಾಲಿಬಾನ್ ಉಗ್ರರು ಕಾಬೂಲ್ ನಗರವನ್ನು ಆಕ್ರಮಿಸಲು ಬರುತ್ತಿದ್ದಂತೆ ಅಶ್ರಫ್ ಘನಿ ಅವರು ಅಫ್ಗಾನಿಸ್ತಾನದಿಂದ ಕುಟುಂಬದ ಜೊತೆ ಪಲಾಯನ ಮಾಡಿದ್ದರು.</p>.<p>‘ತಾಲಿಬಾನಿಗಳು ಗೆದ್ದಿದ್ದಾರೆ. ರಕ್ತಪಾತ’ವನ್ನು ತಪ್ಪಿಸಲು ದೇಶ ಬಿಟ್ಟು ಹೋಗುತ್ತಿರುವುದಾಗಿ ಅಶ್ರಫ್ ಘನಿ ಫೇಸ್ಬುಕ್ ಪೋಸ್ಟ್ನಲ್ಲಿ ಹೇಳಿದ್ದರು.</p>.<p>ಬುಧವಾರದವರೆಗೂ ಅವರು ಎಲ್ಲಿದ್ದಾರೆ ಎಂಬುದು ತಿಳಿದಿರಲಿಲ್ಲ, ಉಜ್ಬೆಕಿಸ್ತಾನ್ ಅಥವಾ ಒಮನ್ಗೆ ಪಲಾಯನ ಮಾಡಿರಬಹುದು ಎಂದು ಊಹಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>