<p><strong>ಕಂಪಾಲಾ:</strong> ಉಗಾಂಡದಲ್ಲಿ<span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41"> ಕೊರೊನಾ ಹರಡುವಿಕೆ</span> ಆರಂಭವಾದಾಗಿನಿಂದ ರಕ್ತದ ಪೂರೈಕೆ ತೀವ್ರವಾಗಿ ಕುಸಿದಿದೆ. ಇದಕ್ಕೆ ಕಾರಣ <span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41">ರಕ್ತದಾನ ಮಾಡಲು ಜನರು ನಿರಾಸಕ್ತಿ ತೋರುತ್ತಿರುವುದೇ ಆಗಿದೆ ಎಂದು </span>ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪೂರ್ವ ಆಫ್ರಿಕಾ ದೇಶದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಮಾಡುತ್ತಿದ್ದರು. ಆದರೆ. ಕೊರೊನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಇದ್ದರಿಂದ ರಕ್ತ ಸಂಗ್ರಹಿಸಬೇಕಾದ ಸರ್ಕಾರಿ ಸಂಸ್ಥೆಗಳು ಗುರಿ ತಲುಪುವಲ್ಲಿ ವಿಫಲವಾಗಿವೆ ಎಂದು ಮೂಲಗಳು ತಿಳಿಸಿವೆ.</p>.<p>ಇತ್ತೀಚಿಗೆ ಕಂಪಾಲಾದಲ್ಲಿ ನಿರ್ದೇಶಕ ಡಾ.ಎಮ್ಯಾನುಯೆಲ್ ಬತಿಬ್ವೆ ಮಾತನಾಡಿ, ‘ರಕ್ತದ ಕೊರತೆಯಿಂದಾಗಿ <span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41">ಆರ್ಥಿಕ ದುರ್ಬಲರಲ್ಲಿ</span> ಅನೇಕ ಸಾವು–ನೋವುಗಳು ಸಂಭವಿಸುತ್ತಿವೆ’ ಎಂದು ಉಲ್ಲೇಖಿಸಿದ್ದರು. ಜತೆಗೆ, ರಕ್ತದ ಕೊರತೆಯನ್ನು ‘ವಿಪತ್ತು’ ಎಂದೇ ಕರೆದಿದ್ದರು.</p>.<p>ರಕ್ತದಾನಿಗಳನ್ನು ಸಜ್ಜುಗೊಳಿಸಲು ಅಧಿಕಾರಿಗಳಿಗೆ ಸಹಾಯ ಮಾಡುವ ಉಗಾಂಡಾ ರೆಡ್ಕ್ರಾಸ್, ಕೋವಿಡ್ ಆತಂಕದ ಸಮಯದಲ್ಲಿ ದಾನಿಗಳನ್ನು ಆಯ್ಕೆ ಮಾಡುವುದು ಸುಲಭವಲ್ಲ ಎಂದು ಹೇಳಿದ್ದಾರೆ.</p>.<p>ಉಗಾಂಡಾದಲ್ಲಿ ಇದುವರೆಗೆ 8,965 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 82 ಮಂದಿ ಮೃತಪಟ್ಟಿದ್ದಾರೆ.</p>.<p>‘ಜನರು ಕೋವಿಡ್ನಿಂದಾಗಿ ಒತ್ತಡಕ್ಕೊಳಗಾಗಿದ್ದು, ಉತ್ತಮ ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವಿಸುತ್ತಿಲ್ಲ. <span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41">ಇದರಿಂದ</span> ಜನರಲ್ಲಿ ರಕ್ತದ ಉತ್ಪತ್ತಿ ಪ್ರಮಾಣ ಕಡಿಮೆಯಾಗಿದೆ’ ಎಂದು ಐರೀನ್ ನಾಕಾಸಿತಾ ಹೇಳಿದ್ದಾರೆ.</p>.<p>ರೊಮೇನಿಯಾ ಸೇರಿದಂತೆ ಯುರೋಪಿನ ಕೆಲವು ಭಾಗಗಳಲ್ಲಿ ರಕ್ತದ ಕೊರತೆ ಉಂಟಾಗಿರುವ ಕುರಿತು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪಾಲಾ:</strong> ಉಗಾಂಡದಲ್ಲಿ<span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41"> ಕೊರೊನಾ ಹರಡುವಿಕೆ</span> ಆರಂಭವಾದಾಗಿನಿಂದ ರಕ್ತದ ಪೂರೈಕೆ ತೀವ್ರವಾಗಿ ಕುಸಿದಿದೆ. ಇದಕ್ಕೆ ಕಾರಣ <span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41">ರಕ್ತದಾನ ಮಾಡಲು ಜನರು ನಿರಾಸಕ್ತಿ ತೋರುತ್ತಿರುವುದೇ ಆಗಿದೆ ಎಂದು </span>ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪೂರ್ವ ಆಫ್ರಿಕಾ ದೇಶದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಮಾಡುತ್ತಿದ್ದರು. ಆದರೆ. ಕೊರೊನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಇದ್ದರಿಂದ ರಕ್ತ ಸಂಗ್ರಹಿಸಬೇಕಾದ ಸರ್ಕಾರಿ ಸಂಸ್ಥೆಗಳು ಗುರಿ ತಲುಪುವಲ್ಲಿ ವಿಫಲವಾಗಿವೆ ಎಂದು ಮೂಲಗಳು ತಿಳಿಸಿವೆ.</p>.<p>ಇತ್ತೀಚಿಗೆ ಕಂಪಾಲಾದಲ್ಲಿ ನಿರ್ದೇಶಕ ಡಾ.ಎಮ್ಯಾನುಯೆಲ್ ಬತಿಬ್ವೆ ಮಾತನಾಡಿ, ‘ರಕ್ತದ ಕೊರತೆಯಿಂದಾಗಿ <span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41">ಆರ್ಥಿಕ ದುರ್ಬಲರಲ್ಲಿ</span> ಅನೇಕ ಸಾವು–ನೋವುಗಳು ಸಂಭವಿಸುತ್ತಿವೆ’ ಎಂದು ಉಲ್ಲೇಖಿಸಿದ್ದರು. ಜತೆಗೆ, ರಕ್ತದ ಕೊರತೆಯನ್ನು ‘ವಿಪತ್ತು’ ಎಂದೇ ಕರೆದಿದ್ದರು.</p>.<p>ರಕ್ತದಾನಿಗಳನ್ನು ಸಜ್ಜುಗೊಳಿಸಲು ಅಧಿಕಾರಿಗಳಿಗೆ ಸಹಾಯ ಮಾಡುವ ಉಗಾಂಡಾ ರೆಡ್ಕ್ರಾಸ್, ಕೋವಿಡ್ ಆತಂಕದ ಸಮಯದಲ್ಲಿ ದಾನಿಗಳನ್ನು ಆಯ್ಕೆ ಮಾಡುವುದು ಸುಲಭವಲ್ಲ ಎಂದು ಹೇಳಿದ್ದಾರೆ.</p>.<p>ಉಗಾಂಡಾದಲ್ಲಿ ಇದುವರೆಗೆ 8,965 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 82 ಮಂದಿ ಮೃತಪಟ್ಟಿದ್ದಾರೆ.</p>.<p>‘ಜನರು ಕೋವಿಡ್ನಿಂದಾಗಿ ಒತ್ತಡಕ್ಕೊಳಗಾಗಿದ್ದು, ಉತ್ತಮ ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವಿಸುತ್ತಿಲ್ಲ. <span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41">ಇದರಿಂದ</span> ಜನರಲ್ಲಿ ರಕ್ತದ ಉತ್ಪತ್ತಿ ಪ್ರಮಾಣ ಕಡಿಮೆಯಾಗಿದೆ’ ಎಂದು ಐರೀನ್ ನಾಕಾಸಿತಾ ಹೇಳಿದ್ದಾರೆ.</p>.<p>ರೊಮೇನಿಯಾ ಸೇರಿದಂತೆ ಯುರೋಪಿನ ಕೆಲವು ಭಾಗಗಳಲ್ಲಿ ರಕ್ತದ ಕೊರತೆ ಉಂಟಾಗಿರುವ ಕುರಿತು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>