ಖಿನ್ನತೆಯಿಂದ ಬಳಲುತ್ತಿರುವ ನೀರವ್ ಮೋದಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಅಪಾಯ ಹೆಚ್ಚಿರುವುದರಿಂದ ಕಾನೂನು ಪ್ರಕ್ರಿಯೆ ಜಾರಿಗೊಳಿಸಲು ಭಾರತಕ್ಕೆ ಅವರನ್ನು ಹಸ್ತಾಂತರಿಸಬಾರದೆಂದು ನೀರವ್ ಪರ ವಕೀಲರು ವಾದಿಸಿದರು. ವಾದ ಪ್ರತಿವಾದ ಆಲಿಸಿದ ಇಬ್ಬರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು, ಆದಷ್ಟು ಶೀಘ್ರತೀರ್ಪು ಪ್ರಕಟಿಸುವುದಾಗಿ ಹೇಳಿತು.