ನವದೆಹಲಿ: ಯುದ್ಧಪೀಡಿತ ಉಕ್ರೇನ್ನಿಂದ ವಾಪಸಾದ ಭಾರತೀಯ ವಿದ್ಯಾರ್ಥಿಗಳಿಗೆ ದೇಶದ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಭಾನುವಾರ ಇಲ್ಲಿ ಒತ್ತಾಯಿಸಿದರು.
ಇಲ್ಲಿನ ಜಂತರ್ ಮಂತರ್ನಲ್ಲಿ ಸೇರಿದ್ದ ಈ ವಿದ್ಯಾರ್ಥಿಗಳು, ‘ಉಕ್ರೇನ್ನ ಎಲ್ಲ ಭಾರತೀಯ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ‘, ‘ಭಾರತೀಯ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ’ ಎಂಬ ಫಲಕಗಳನ್ನು ಪ್ರದರ್ಶಿಸಿದರು.