’ಯಸ್ ಚಂಡಮಾರುತ ಸದ್ಯ ದಕ್ಷಿಣ ಏಷ್ಯಾದಲ್ಲಿ ಭಾರಿ ಪರಿಣಾಮ ಬೀರುತ್ತಿದೆ. ಚಂಡಮಾರುತ ನಿರ್ವಹಣೆ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ವಿಶ್ವಸಂಸ್ಥೆಯ ಅಧಿಕಾರಿಗಳು ಇಂಗಿತ ವ್ಯಕ್ತಪಡಿಸಿದ್ದಾರೆ. ಅಗತ್ಯ ವಸ್ತುಗಳ ದಾಸ್ತಾನು, ಆಹಾರ ಹಾಗೂ ಇತರ ವಸ್ತುಗಳ ವ್ಯವಸ್ಥೆ ಮಾಡಲಿದ್ದಾರೆ‘ ಎಂದು ಗುಟೆರಸ್ ವಕ್ತಾರ ಸ್ಟೀಫನ್ ದುರ್ಜಾರಿಕ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.