<p class="title"><strong>ದುಬೈ: </strong>ಪೊಲೀಸ್ ಕಸ್ಟಡಿಯಲ್ಲಿನ ಯುವತಿ ಸಾವು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಅನಗತ್ಯ ಬಲ ಪ್ರಯೋಗ ನಡೆಸದಂತೆ ಇರಾನ್ಗೆ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಕರೆ ನೀಡಿದ್ದಾರೆ.</p>.<p class="title">ಇರಾನ್ನ ಪ್ರಾಂತ್ಯದಲ್ಲಿ ಅಶಾಂತಿಗೆ ಕಾರಣವಾಗಿರುವ 22 ವರ್ಷದ ಮಹ್ಸಾ ಅಮಿನಿ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆಯನ್ನು ಅಧಿಕಾರಿಗಳು ತ್ವರಿತವಾಗಿ ನಡೆಸಬೇಕು ಎಂದು ಅವರು ಹೇಳಿದ್ದಾರೆ.</p>.<p class="title">‘ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹೆಚ್ಚುತ್ತಿರುವ ಸಾವು, ನೋವುಗಳ ವರದಿಗಳ ಬಗ್ಗೆ ನಾವು ಕಳವಳ ವ್ಯಕ್ತಪಡಿಸುತ್ತೇವೆ.ಆಕೆಯ ಸಾವಿನ ಬಗ್ಗೆ ಸ್ವತಂತ್ರ ಪ್ರಾಧಿಕಾರದಿಂದ ತ್ವರಿತ, ನಿಷ್ಪಕ್ಷಪಾತ ಮತ್ತು ಪರಿಣಾಮಕಾರಿ ತನಿಖೆ ಅಗತ್ಯವನ್ನು ಒತ್ತಿ ಹೇಳುತ್ತಿದ್ದೇವೆ’ಎಂದು ವಿಶ್ವಸಂಸ್ಥೆ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p class="title">ಇರಾನ್ನ 46 ನಗರ, ಪಟ್ಟಣ ಮತ್ತು ಹಳ್ಳಿಗಳಿಗೆ ಪ್ರತಿಭಟನೆ ವ್ಯಾಪಿಸಿದೆ. ಸೆ.17ರಿಂದ ಪ್ರತಿಭಟನೆ ಆರಂಭವಾದಾಗಿನಿಂದ 41 ಪ್ರತಿಭಟನಕಾರರು ಮತ್ತು ಪೊಲೀಸರು ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಮಾಧ್ಯಮ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ದುಬೈ: </strong>ಪೊಲೀಸ್ ಕಸ್ಟಡಿಯಲ್ಲಿನ ಯುವತಿ ಸಾವು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಅನಗತ್ಯ ಬಲ ಪ್ರಯೋಗ ನಡೆಸದಂತೆ ಇರಾನ್ಗೆ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಕರೆ ನೀಡಿದ್ದಾರೆ.</p>.<p class="title">ಇರಾನ್ನ ಪ್ರಾಂತ್ಯದಲ್ಲಿ ಅಶಾಂತಿಗೆ ಕಾರಣವಾಗಿರುವ 22 ವರ್ಷದ ಮಹ್ಸಾ ಅಮಿನಿ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆಯನ್ನು ಅಧಿಕಾರಿಗಳು ತ್ವರಿತವಾಗಿ ನಡೆಸಬೇಕು ಎಂದು ಅವರು ಹೇಳಿದ್ದಾರೆ.</p>.<p class="title">‘ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹೆಚ್ಚುತ್ತಿರುವ ಸಾವು, ನೋವುಗಳ ವರದಿಗಳ ಬಗ್ಗೆ ನಾವು ಕಳವಳ ವ್ಯಕ್ತಪಡಿಸುತ್ತೇವೆ.ಆಕೆಯ ಸಾವಿನ ಬಗ್ಗೆ ಸ್ವತಂತ್ರ ಪ್ರಾಧಿಕಾರದಿಂದ ತ್ವರಿತ, ನಿಷ್ಪಕ್ಷಪಾತ ಮತ್ತು ಪರಿಣಾಮಕಾರಿ ತನಿಖೆ ಅಗತ್ಯವನ್ನು ಒತ್ತಿ ಹೇಳುತ್ತಿದ್ದೇವೆ’ಎಂದು ವಿಶ್ವಸಂಸ್ಥೆ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p class="title">ಇರಾನ್ನ 46 ನಗರ, ಪಟ್ಟಣ ಮತ್ತು ಹಳ್ಳಿಗಳಿಗೆ ಪ್ರತಿಭಟನೆ ವ್ಯಾಪಿಸಿದೆ. ಸೆ.17ರಿಂದ ಪ್ರತಿಭಟನೆ ಆರಂಭವಾದಾಗಿನಿಂದ 41 ಪ್ರತಿಭಟನಕಾರರು ಮತ್ತು ಪೊಲೀಸರು ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಮಾಧ್ಯಮ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>