<p><strong>ಬಾಸ್ಟನ್:</strong> ‘ವಿಶ್ವಸಂಸ್ಥೆ, ವಿಶ್ವ ಬ್ಯಾಂಕ್ ಹಾಗೂ ಅಂತರರಾಷ್ಟ್ರೀಯ ಹಣಕಾಸು ನಿಧಿಯಂತಹ (ಐಎಂಎಫ್) ಸಂಸ್ಥೆಗಳಲ್ಲಿ ತುರ್ತಾಗಿ ಸುಧಾರಣೆಗಳನ್ನು ತರುವುದು ಅಗತ್ಯ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದರು.</p>.<p>ಹಾರ್ವರ್ಡ್ ಕೆನಡಿ ಸ್ಕೂಲ್ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹಲವು ದೇಶಗಳು ವ್ಯಾಪಾರ, ಭದ್ರತೆ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಒದಗಿಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಈ ಜಾಗತಿಕ ಸಂಸ್ಥೆಗಳ ಮೊರೆ ಹೋಗಿವೆ. ಆದರೆ, ಈ ದೇಶಗಳ ಅಹವಾಲುಗಳಿಗೆ ಈ ವರೆಗೆ ಸ್ಪಂದನೆ ಸಿಕ್ಕಿಲ್ಲ’ ಎಂದು ಹೇಳಿದರು.</p>.<p>‘ಎಲ್ಲ ರಾಷ್ಟ್ರಗಳು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುತ್ತಿರುವಾಗ ಈ ಜಾಗತಿಕ ಸಂಸ್ಥೆಗಳ ಕಾರ್ಯವೈಖರಿ ಮಾತ್ರ ಹಲವಾರು ದಶಕಗಳಿಂದ ಸುಧಾರಣೆಯಾಗಿಲ್ಲ’ ಎಂದು ಹೇಳಿದರು.</p>.<p class="Subhead">‘ಎರಡಂಕಿ ಪ್ರಗತಿ ವಿಶ್ವಾಸ’: ‘ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಪ್ರಗತಿ ದರ ಎರಡಂಕಿ ಸಮೀಪಿಸುವ ವಿಶ್ವಾಸ ಇದೆ’ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.</p>.<p>‘ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿಯೂ ಹೊರಹೊಮ್ಮಲಿದೆ’ ಎಂದು ಅವರು ಹೇಳಿದರು.</p>.<p>‘ಮುಂದಿನ ಹಣಕಾಸು ವರ್ಷದಲ್ಲಿ ಪ್ರಗತಿ ದರ ಶೇ 7.5ರಿಂದ 8.5ರಷ್ಟಾಗುವ ಅಂದಾಜಿದೆ. ಮುಂದಿನ ದಶಕದ ವರೆಗೆ ಇದೇ ಪ್ರಗತಿ ದರ ಕಾಯ್ದುಕೊಳ್ಳಲಾಗುವುದು’ ಎಂದು ಹೇಳಿದರು.</p>.<p><a href="https://www.prajavani.net/india-news/defence-minister-rajnath-singh-says-by-the-advice-of-mahatma-gandhi-v-d-savarkar-filed-mercy-875223.html" itemprop="url">ಗಾಂಧಿ ಸಲಹೆ ಮೇರೆಗೆ ಸಾವರ್ಕರ್ ಕ್ಷಮಾಪಣೆ ಪತ್ರ ಬರೆದಿದ್ದರು: ರಾಜನಾಥ್ ಸಿಂಗ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಸ್ಟನ್:</strong> ‘ವಿಶ್ವಸಂಸ್ಥೆ, ವಿಶ್ವ ಬ್ಯಾಂಕ್ ಹಾಗೂ ಅಂತರರಾಷ್ಟ್ರೀಯ ಹಣಕಾಸು ನಿಧಿಯಂತಹ (ಐಎಂಎಫ್) ಸಂಸ್ಥೆಗಳಲ್ಲಿ ತುರ್ತಾಗಿ ಸುಧಾರಣೆಗಳನ್ನು ತರುವುದು ಅಗತ್ಯ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದರು.</p>.<p>ಹಾರ್ವರ್ಡ್ ಕೆನಡಿ ಸ್ಕೂಲ್ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹಲವು ದೇಶಗಳು ವ್ಯಾಪಾರ, ಭದ್ರತೆ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಒದಗಿಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಈ ಜಾಗತಿಕ ಸಂಸ್ಥೆಗಳ ಮೊರೆ ಹೋಗಿವೆ. ಆದರೆ, ಈ ದೇಶಗಳ ಅಹವಾಲುಗಳಿಗೆ ಈ ವರೆಗೆ ಸ್ಪಂದನೆ ಸಿಕ್ಕಿಲ್ಲ’ ಎಂದು ಹೇಳಿದರು.</p>.<p>‘ಎಲ್ಲ ರಾಷ್ಟ್ರಗಳು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುತ್ತಿರುವಾಗ ಈ ಜಾಗತಿಕ ಸಂಸ್ಥೆಗಳ ಕಾರ್ಯವೈಖರಿ ಮಾತ್ರ ಹಲವಾರು ದಶಕಗಳಿಂದ ಸುಧಾರಣೆಯಾಗಿಲ್ಲ’ ಎಂದು ಹೇಳಿದರು.</p>.<p class="Subhead">‘ಎರಡಂಕಿ ಪ್ರಗತಿ ವಿಶ್ವಾಸ’: ‘ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಪ್ರಗತಿ ದರ ಎರಡಂಕಿ ಸಮೀಪಿಸುವ ವಿಶ್ವಾಸ ಇದೆ’ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.</p>.<p>‘ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿಯೂ ಹೊರಹೊಮ್ಮಲಿದೆ’ ಎಂದು ಅವರು ಹೇಳಿದರು.</p>.<p>‘ಮುಂದಿನ ಹಣಕಾಸು ವರ್ಷದಲ್ಲಿ ಪ್ರಗತಿ ದರ ಶೇ 7.5ರಿಂದ 8.5ರಷ್ಟಾಗುವ ಅಂದಾಜಿದೆ. ಮುಂದಿನ ದಶಕದ ವರೆಗೆ ಇದೇ ಪ್ರಗತಿ ದರ ಕಾಯ್ದುಕೊಳ್ಳಲಾಗುವುದು’ ಎಂದು ಹೇಳಿದರು.</p>.<p><a href="https://www.prajavani.net/india-news/defence-minister-rajnath-singh-says-by-the-advice-of-mahatma-gandhi-v-d-savarkar-filed-mercy-875223.html" itemprop="url">ಗಾಂಧಿ ಸಲಹೆ ಮೇರೆಗೆ ಸಾವರ್ಕರ್ ಕ್ಷಮಾಪಣೆ ಪತ್ರ ಬರೆದಿದ್ದರು: ರಾಜನಾಥ್ ಸಿಂಗ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>