<p><strong>ವಿಶ್ವಸಂಸ್ಥೆ</strong>: ಜಾಗತಿಕ ಭಯೋತ್ಪಾದನೆ ವಿರುದ್ಧ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಚರ್ಚಿಸಲು ಸಭೆಯೊಂದನ್ನು ಆಯೋಜಿಸುವಲ್ಲಿ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ವಿಫಲವಾಗಿವೆ. ವಿಶ್ವಸಂಸ್ಥೆಯ ಈ ವಿಳಂಬ ಧೋರಣೆ ಮುಂದುವರಿಯುತ್ತಲೇ ಇದೆ ಎಂದು ಭಾರತ ಹೇಳಿದೆ.</p>.<p>ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಮಾತನಾಡಿದ, ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ರಾಯಭಾರ ಕಚೇರಿಯಲ್ಲಿ ಎರಡನೇ ಕಾರ್ಯದರ್ಶಿಯಾಗಿರುವ ದಿನೇಶ್ ಸೇತಿಯಾ ಅವರು ಭಾರತದ ನಿಲುವನ್ನು ಮಂಡಿಸಿದರು.</p>.<p>‘ಭಯೋತ್ಪಾದನೆ ಕುರಿತಂತೆ ಎಲ್ಲರೂ ಒಪ್ಪುವಂತಹ ವ್ಯಾಖ್ಯಾನಕ್ಕೆ ವಿಶ್ವಸಂಸ್ಥೆ ಸಮ್ಮತ ವ್ಯಕ್ತಪಡಿಸುತ್ತಿಲ್ಲ. ಜಾಗತಿಕವಾಗಿ ಕಂಟಕವಾಗಿ ಪರಿಣಮಿಸಿರುವ ಉಗ್ರರ ಚಟುವಟಿಕೆಗಳನ್ನು ನಿರ್ಮೂಲನೆ ಮಾಡಲು ಸಮಗ್ರ ನೀತಿಯನ್ನು ಸಹ ರೂಪಿಸುತ್ತಿಲ್ಲ’ ಎಂದು ಅವರು ಕಳವಳ ವ್ಯಕ್ತಪಡಿಸಿದರು.</p>.<p>‘ಭಯೋತ್ಪಾದನೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಲ್ಲಿ ನಾವು ವಿಫಲರಾಗುತ್ತಿದ್ದೇವೆ. ಹೀಗಾಗಿ, ವಿಶ್ವಸಂಸ್ಥೆಯ ಪ್ರಸ್ತುತತೆ ಬಗ್ಗೆಯೇ ಅನುಮಾನಪಡುವಂತಾಗಿದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ</strong>: ಜಾಗತಿಕ ಭಯೋತ್ಪಾದನೆ ವಿರುದ್ಧ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಚರ್ಚಿಸಲು ಸಭೆಯೊಂದನ್ನು ಆಯೋಜಿಸುವಲ್ಲಿ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ವಿಫಲವಾಗಿವೆ. ವಿಶ್ವಸಂಸ್ಥೆಯ ಈ ವಿಳಂಬ ಧೋರಣೆ ಮುಂದುವರಿಯುತ್ತಲೇ ಇದೆ ಎಂದು ಭಾರತ ಹೇಳಿದೆ.</p>.<p>ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಮಾತನಾಡಿದ, ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ರಾಯಭಾರ ಕಚೇರಿಯಲ್ಲಿ ಎರಡನೇ ಕಾರ್ಯದರ್ಶಿಯಾಗಿರುವ ದಿನೇಶ್ ಸೇತಿಯಾ ಅವರು ಭಾರತದ ನಿಲುವನ್ನು ಮಂಡಿಸಿದರು.</p>.<p>‘ಭಯೋತ್ಪಾದನೆ ಕುರಿತಂತೆ ಎಲ್ಲರೂ ಒಪ್ಪುವಂತಹ ವ್ಯಾಖ್ಯಾನಕ್ಕೆ ವಿಶ್ವಸಂಸ್ಥೆ ಸಮ್ಮತ ವ್ಯಕ್ತಪಡಿಸುತ್ತಿಲ್ಲ. ಜಾಗತಿಕವಾಗಿ ಕಂಟಕವಾಗಿ ಪರಿಣಮಿಸಿರುವ ಉಗ್ರರ ಚಟುವಟಿಕೆಗಳನ್ನು ನಿರ್ಮೂಲನೆ ಮಾಡಲು ಸಮಗ್ರ ನೀತಿಯನ್ನು ಸಹ ರೂಪಿಸುತ್ತಿಲ್ಲ’ ಎಂದು ಅವರು ಕಳವಳ ವ್ಯಕ್ತಪಡಿಸಿದರು.</p>.<p>‘ಭಯೋತ್ಪಾದನೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಲ್ಲಿ ನಾವು ವಿಫಲರಾಗುತ್ತಿದ್ದೇವೆ. ಹೀಗಾಗಿ, ವಿಶ್ವಸಂಸ್ಥೆಯ ಪ್ರಸ್ತುತತೆ ಬಗ್ಗೆಯೇ ಅನುಮಾನಪಡುವಂತಾಗಿದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>