<p><strong>ಜಕಾರ್ತ</strong>: ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರದೇಶದಲ್ಲಿ ಸಂಭವಿಸಿದ 5.6 ತೀವ್ರತೆಯ ಭೂಕಂಪದಲ್ಲಿ 20 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿ ತಿಳಿಸಿದ್ದಾರೆ.</p>.<p>ಪಶ್ಚಿಮ ಜಾವಾದಲ್ಲೇ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, 20 ಮಂದಿ ಮೃತಪಟ್ಟು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಸಿಯಾಂಜುರ್ ಪಟ್ಟಣದ ಸರ್ಕಾರಿ ಅಧಿಕಾರಿ ಹರ್ಮನ್ ಸುಹರ್ಮನ್ ತಿಳಿಸಿರುವುದಾಗಿ ಮೆಟ್ರೊ ಟಿ.ವಿ ಸುದ್ದಿವಾಹಿನಿ ವರದಿ ಮಾಡಿದೆ.</p>.<p>‘ಇದು ಸಿಯಾಂಜುರ್ನ ಒಂದು ಆಸ್ಪತ್ರೆಯ ಮಾಹಿತಿಯಾಗಿದ್ದು, ಇಲ್ಲಿ ಇನ್ನೂ 4 ಆಸ್ಪತ್ರೆಗಳು ಇರುವುದರಿಂದ ಅಲ್ಲಿ ಎಷ್ಟು ಮಂದಿ ದಾಖಲಾಗಿದ್ದಾರೆ ಎಂಬ ಮಾಹಿತಿ ಇನ್ನಷ್ಟೆ ಸಿಗಬೇಕಿದೆ. ಹಾಗಾಗಿ, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ’ಎಂದು ಅವರು ತಿಳಿಸಿದ್ದಾರೆ.</p>.<p>ಭೂಕಂಪದಿಂದ 14 ಮಂದಿ ಸಾವಿಗೀಡಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಹೇಳಿದೆ.</p>.<p>ರಾಜಧಾನಿ ಜಕಾರ್ತದಿಂದ 75 ಕಿ.ಮೀ ದೂರದ ಸಿಯಾಂಜುರ್ನ ಭೂಮಿಯ 10 ಕಿ.ಮೀ(6.2 ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಮತ್ತು ಭೂಭೌತಶಾಸ್ತರ ಸಂಸ್ಥೆ ತಿಳಿಸಿದೆ. ಸುನಾಮಿ ಸಾಧ್ಯತೆ ಇಲ್ಲ ಎಂದು ಅದು ಸ್ಪಷ್ಟಪಡಿಸಿದೆ.</p>.<p>ಹಲವು ಮನೆಗಳು ಮತ್ತು ಇಸ್ಲಾಮಿಕ್ ವಸತಿ ಶಾಲೆಗೆ ಹಾನಿಯಾಗಿದೆ. ಅಧಿಕಾರಿಗಳು ಹಾನಿಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.<br /><br />‘ದೊಡ್ಡ ಕಂಪನದ ಅನುಭವವಾಯಿತು. ನನ್ನ ಕಚೇರಿಯ ಗೋಡೆ ಮತ್ತು ಛಾವಣೆಗೆ ಹಾನಿಯಾಗಿವೆ’ಎಂದು ಸಿಯಾಂಜುರ್ನ ನಿವಾಸಿ ಮುಚ್ಲೀಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಕಾರ್ತ</strong>: ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರದೇಶದಲ್ಲಿ ಸಂಭವಿಸಿದ 5.6 ತೀವ್ರತೆಯ ಭೂಕಂಪದಲ್ಲಿ 20 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿ ತಿಳಿಸಿದ್ದಾರೆ.</p>.<p>ಪಶ್ಚಿಮ ಜಾವಾದಲ್ಲೇ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, 20 ಮಂದಿ ಮೃತಪಟ್ಟು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಸಿಯಾಂಜುರ್ ಪಟ್ಟಣದ ಸರ್ಕಾರಿ ಅಧಿಕಾರಿ ಹರ್ಮನ್ ಸುಹರ್ಮನ್ ತಿಳಿಸಿರುವುದಾಗಿ ಮೆಟ್ರೊ ಟಿ.ವಿ ಸುದ್ದಿವಾಹಿನಿ ವರದಿ ಮಾಡಿದೆ.</p>.<p>‘ಇದು ಸಿಯಾಂಜುರ್ನ ಒಂದು ಆಸ್ಪತ್ರೆಯ ಮಾಹಿತಿಯಾಗಿದ್ದು, ಇಲ್ಲಿ ಇನ್ನೂ 4 ಆಸ್ಪತ್ರೆಗಳು ಇರುವುದರಿಂದ ಅಲ್ಲಿ ಎಷ್ಟು ಮಂದಿ ದಾಖಲಾಗಿದ್ದಾರೆ ಎಂಬ ಮಾಹಿತಿ ಇನ್ನಷ್ಟೆ ಸಿಗಬೇಕಿದೆ. ಹಾಗಾಗಿ, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ’ಎಂದು ಅವರು ತಿಳಿಸಿದ್ದಾರೆ.</p>.<p>ಭೂಕಂಪದಿಂದ 14 ಮಂದಿ ಸಾವಿಗೀಡಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಹೇಳಿದೆ.</p>.<p>ರಾಜಧಾನಿ ಜಕಾರ್ತದಿಂದ 75 ಕಿ.ಮೀ ದೂರದ ಸಿಯಾಂಜುರ್ನ ಭೂಮಿಯ 10 ಕಿ.ಮೀ(6.2 ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಮತ್ತು ಭೂಭೌತಶಾಸ್ತರ ಸಂಸ್ಥೆ ತಿಳಿಸಿದೆ. ಸುನಾಮಿ ಸಾಧ್ಯತೆ ಇಲ್ಲ ಎಂದು ಅದು ಸ್ಪಷ್ಟಪಡಿಸಿದೆ.</p>.<p>ಹಲವು ಮನೆಗಳು ಮತ್ತು ಇಸ್ಲಾಮಿಕ್ ವಸತಿ ಶಾಲೆಗೆ ಹಾನಿಯಾಗಿದೆ. ಅಧಿಕಾರಿಗಳು ಹಾನಿಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.<br /><br />‘ದೊಡ್ಡ ಕಂಪನದ ಅನುಭವವಾಯಿತು. ನನ್ನ ಕಚೇರಿಯ ಗೋಡೆ ಮತ್ತು ಛಾವಣೆಗೆ ಹಾನಿಯಾಗಿವೆ’ಎಂದು ಸಿಯಾಂಜುರ್ನ ನಿವಾಸಿ ಮುಚ್ಲೀಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>