<p class="title"><strong>ವಾಷಿಂಗ್ಟನ್</strong>: ಭಾರತದ ತ್ರಿಪುರಾ ರಾಜ್ಯ ಮತ್ತು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಗಳ ಬಗ್ಗೆ ಅಮೆರಿಕದ ಸಂಸತ್ ಸದಸ್ಯ ಆ್ಯಂಡಿ ಲೆವಿನ್ ಕಳವಳ ವ್ಯಕ್ತಪಡಿಸಿದ್ದಾರೆ.</p>.<p class="title">‘ಬಾಂಗ್ಲಾದೇಶ ಮತ್ತು ಭಾರತದ ತ್ರಿಪುರಾದಲ್ಲಿನ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ನಿರಂತರ ಹಿಂಸಾಚಾರದ ಸುದ್ದಿಯಿಂದ ನಾನು ತೀವ್ರ ಕಳವಳಗೊಂಡಿದ್ದೇನೆ’ ಎಂದು ಕಾಂಗ್ರೆಸ್ ಸದಸ್ಯ ಆ್ಯಂಡಿ ಲೆವಿನ್ ಟ್ವೀಟ್ವೊಂದರಲ್ಲಿ ಹೇಳಿದ್ದಾರೆ.</p>.<p class="title">ಸಾಮಾಜಿಕ ಮಾಧ್ಯಮದಲ್ಲಿ ಧರ್ಮನಿಂದನೆಯ ಪೋಸ್ಟ್ವೊಂದನ್ನು ಮಾಡಿದ ಆರೋಪದಲ್ಲಿ ಅಕ್ಟೋಬರ್ ಮಧ್ಯಭಾಗದಲ್ಲಿ ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆಯ ವೇಳೆ ಉದ್ರಿಕ್ತ ಗುಂಪು ಹಿಂದೂ ದೇವಾಲಯಗಳು ಮತ್ತು ಮನೆಗಳ ಮೇಲೆ ದಾಳಿ ಮಾಡಿತ್ತು.</p>.<p class="bodytext">ಬಾಂಗ್ಲಾದೇಶದಲ್ಲಿನ ದಾಳಿ ಖಂಡಿಸಿ ಅಲ್ಲಿನ ಹಿಂದೂ ಅಲ್ಪಸಂಖ್ಯಾತರಿಗೆ ನ್ಯಾಯಕ್ಕಾಗಿ ಆಗ್ರಹಿಸಿ ತ್ರಿಪುರಾದ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದರಿಂದ ರಾಜ್ಯದಲ್ಲಿ ಘರ್ಷಣೆ ಉಂಟಾಗಿತ್ತು.</p>.<p class="bodytext">ಈ ಹಿಂಸಾಚಾರಗಳಿಗೆ ಸಂಬಂಧಿಸಿದ ವಾಷಿಂಗ್ಟನ್ ಪೋಸ್ಟ್ನ ಸುದ್ದಿಯನ್ನು ಮರು ಟ್ವೀಟ್ ಮಾಡಿರುವ ಅವರು, ‘ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆಗಳನ್ನು ಖಂಡಿಸಬೇಕು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ವಾಷಿಂಗ್ಟನ್</strong>: ಭಾರತದ ತ್ರಿಪುರಾ ರಾಜ್ಯ ಮತ್ತು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಗಳ ಬಗ್ಗೆ ಅಮೆರಿಕದ ಸಂಸತ್ ಸದಸ್ಯ ಆ್ಯಂಡಿ ಲೆವಿನ್ ಕಳವಳ ವ್ಯಕ್ತಪಡಿಸಿದ್ದಾರೆ.</p>.<p class="title">‘ಬಾಂಗ್ಲಾದೇಶ ಮತ್ತು ಭಾರತದ ತ್ರಿಪುರಾದಲ್ಲಿನ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ನಿರಂತರ ಹಿಂಸಾಚಾರದ ಸುದ್ದಿಯಿಂದ ನಾನು ತೀವ್ರ ಕಳವಳಗೊಂಡಿದ್ದೇನೆ’ ಎಂದು ಕಾಂಗ್ರೆಸ್ ಸದಸ್ಯ ಆ್ಯಂಡಿ ಲೆವಿನ್ ಟ್ವೀಟ್ವೊಂದರಲ್ಲಿ ಹೇಳಿದ್ದಾರೆ.</p>.<p class="title">ಸಾಮಾಜಿಕ ಮಾಧ್ಯಮದಲ್ಲಿ ಧರ್ಮನಿಂದನೆಯ ಪೋಸ್ಟ್ವೊಂದನ್ನು ಮಾಡಿದ ಆರೋಪದಲ್ಲಿ ಅಕ್ಟೋಬರ್ ಮಧ್ಯಭಾಗದಲ್ಲಿ ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆಯ ವೇಳೆ ಉದ್ರಿಕ್ತ ಗುಂಪು ಹಿಂದೂ ದೇವಾಲಯಗಳು ಮತ್ತು ಮನೆಗಳ ಮೇಲೆ ದಾಳಿ ಮಾಡಿತ್ತು.</p>.<p class="bodytext">ಬಾಂಗ್ಲಾದೇಶದಲ್ಲಿನ ದಾಳಿ ಖಂಡಿಸಿ ಅಲ್ಲಿನ ಹಿಂದೂ ಅಲ್ಪಸಂಖ್ಯಾತರಿಗೆ ನ್ಯಾಯಕ್ಕಾಗಿ ಆಗ್ರಹಿಸಿ ತ್ರಿಪುರಾದ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದರಿಂದ ರಾಜ್ಯದಲ್ಲಿ ಘರ್ಷಣೆ ಉಂಟಾಗಿತ್ತು.</p>.<p class="bodytext">ಈ ಹಿಂಸಾಚಾರಗಳಿಗೆ ಸಂಬಂಧಿಸಿದ ವಾಷಿಂಗ್ಟನ್ ಪೋಸ್ಟ್ನ ಸುದ್ದಿಯನ್ನು ಮರು ಟ್ವೀಟ್ ಮಾಡಿರುವ ಅವರು, ‘ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆಗಳನ್ನು ಖಂಡಿಸಬೇಕು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>