‘ಒಗ್ಗಟ್ಟಾಗಿ ಹೋರಾಡಿದರೆ ಕಾರ್ಪೊರೇಟ್ ಹಿತಾಸಕ್ತಿಗಳನ್ನು ಸೋಲಿಸಿ ಮುನ್ನಡೆಯಬಹುದು’ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದಿದ್ದಾರೆ.
ನಿನ್ನೆ ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ದೇಶವನ್ನು ಉದ್ಧೇಶಿಸಿ ಮಾತನಾಡಿದ್ದ ಮೋದಿ, ಕೃಷಿ ಕಾಯ್ದೆಗಳನ್ನು ರೈತರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಜಾರಿಗೆ ತರಲಾಗಿತ್ತು. ಆದರೆ, ಒಂದು ವರ್ಗದ ರೈತರಿಗೆ ಮನವರಿಕೆ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ, ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿದ್ದೇವೆ. ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಇದಕ್ಕಾಗಿ ಬೇಕಾದ ಸಾಂವಿಧಾನಿಕ ಬದಲಾವಣೆ ಮಾಡಲಾಗುವುದು ’ಎಂದು ಘೋಷಿಸಿದ್ದರು.