ವಾಷಿಂಗ್ಟನ್: ಮುಂಬೈ ಭಯೋತ್ಪಾದನಾ ದಾಳಿಯ (2008) ಪ್ರಮುಖ ಆರೋಪಿ, ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹವ್ವೂರ್ ರಾಣಾನನ್ನು ಹಸ್ತಾಂತರಿಸುವಂತೆ ಭಾರತವು ಅಮೆರಿಕಕ್ಕೆ ಮನವಿ ಮಾಡಿದ್ದು,ಈ ಬಗ್ಗೆ ಪ್ರತಿಕ್ರಿಯಿಸಲು ಅವಕಾಶ ನೀಡಬೇಕು ಎಂದು ಕೋರಿ ತಹವ್ವೂರ್ ಸಲ್ಲಿಸಿದ್ದ ಅರ್ಜಿಗೆ ಅಮೆರಿಕದ ನ್ಯಾಯಾಲಯವು ಸಮ್ಮತಿ ನೀಡಿದೆ.