<p><strong>ವಾಷಿಂಗ್ಟನ್: </strong>2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹಾವ್ವೂರ್ ರಾಣಾನ ಬಿಡುಗಡೆಯನ್ನುಅಮೆರಿಕ ಸರ್ಕಾರ ವಿರೋಧಿಸಿದೆ. ಆತ ಪರಾರಿಯಾಗುವ ಸಾಧ್ಯತೆ ಇರುವುದರಿಂದ ಬಿಡುಗಡೆ ಸರಿಯಲ್ಲ ಎಂದು ಕ್ಯಾಲಿಫೋರ್ನಿಯಾದ ಫೆಡರಲ್ ಕೋರ್ಟ್ಗೆ ಸರ್ಕಾರ ತಿಳಿಸಿದೆ.</p>.<p>ಈ ಹಿಂದೆ ಭಾರತ ಈತನನ್ನು ‘ತಲೆಮರೆಸಿಕೊಂಡ ಆರೋಪಿ‘ ಎಂದು ಘೋಷಿಸಿತ್ತು.</p>.<p>ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ ರಾಣಾ(59)ನನ್ನುಬಂಧಿಸಿ, ತಮ್ಮ ದೇಶಕ್ಕೆ ಹಸ್ತಾಂತರಿಸುವಂತೆ ಭಾರತ, ಅಮೆರಿಕವನ್ನು ಕೇಳಿತ್ತು. ಈ ಕಾರಣ ಆತನನ್ನು ಜೂನ್ 10ರಂದು ಲಾಸ್ ಏಂಜಲೀಸ್ನಲ್ಲಿ ಬಂಧಿಸಲಾಗಿತ್ತು. ರಾಣಾ, ಮುಂಬೈ ದಾಳಿ ರೂವಾರಿ ಡೇವಿಡ್ ಕೊಲ್ಮೆನ್ ಹೆಡ್ಲಿಯ ಬಾಲ್ಯ ಸ್ನೇಹಿತ. ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತ ವಿಚಾರಣೆ ಫೆ.12ಕ್ಕೆ ನಿಗದಿಪಡಿಸಲಾಗಿದೆ.</p>.<p>ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ರಾಣಾನನ್ನು ಬಂಧನದಿಂದ ಮುಕ್ತಗೊಳಿಸಬೇಕು ಎಂದು ರಾಣಾ ಪರ ವಕೀಲರು ಕೋರಿದ್ದಾರೆ. ಲಾಸ್ ಏಂಜಲೀಸ್ನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಎದುರು ಅಮೆರಿಕ ಸರ್ಕಾರದ ಅಟಾರ್ನಿ ನಿಕೋಲಾ ಟಿ ಹಾನ್ನಾ ಅವರು ರಾಣಾ ಬಿಡುಗಡೆ ವಿರೋಧಿಸಿ ಗೊತ್ತುವಳಿ ಮಂಡಿಸಿದ್ದಾರೆ.</p>.<p>’ರಾಣಾ ಪರಾರಿಯಾಗುವುದಿಲ್ಲ, ಸಮುದಾಯಕ್ಕೆ ಯಾವುದೇ ರೀತಿಯಲ್ಲೂ ಅಪಾಯ ಎಸಗುವುದಿಲ್ಲ ಎಂಬುದನ್ನು ಸಾಬೀತು ಪಡಿಸಿದರೆ ಮಾತ್ರ ವಿಶೇಷ ಸಂದರ್ಭದಲ್ಲಿ ಆತನಿಗೆ ಜಾಮೀನು ನೀಡಬಹುದು‘ ಎಂದು ಅಟಾರ್ನಿ ಹೇಳಿದ್ದಾರೆ.</p>.<p>ಪಾಕಿಸ್ತಾನ-ಅಮೆರಿಕನ್ ಎಲ್ಇಟಿ ಭಯೋತ್ಪಾದಕ ಹೆಡ್ಲಿ 2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚು ರೂಪಿಸಿದ್ದ. ಈತ ಪೊಲೀಸರ ಎದುರು ತಪ್ಪು ಒಪ್ಪಿಕೊಂಡು, ದಾಳಿಯಲ್ಲಿ ಸಂಚು ರೂಪಿಸಿದ್ದಾಗಿ ಅಮೆರಿಕದಲ್ಲಿ 35 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್: </strong>2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹಾವ್ವೂರ್ ರಾಣಾನ ಬಿಡುಗಡೆಯನ್ನುಅಮೆರಿಕ ಸರ್ಕಾರ ವಿರೋಧಿಸಿದೆ. ಆತ ಪರಾರಿಯಾಗುವ ಸಾಧ್ಯತೆ ಇರುವುದರಿಂದ ಬಿಡುಗಡೆ ಸರಿಯಲ್ಲ ಎಂದು ಕ್ಯಾಲಿಫೋರ್ನಿಯಾದ ಫೆಡರಲ್ ಕೋರ್ಟ್ಗೆ ಸರ್ಕಾರ ತಿಳಿಸಿದೆ.</p>.<p>ಈ ಹಿಂದೆ ಭಾರತ ಈತನನ್ನು ‘ತಲೆಮರೆಸಿಕೊಂಡ ಆರೋಪಿ‘ ಎಂದು ಘೋಷಿಸಿತ್ತು.</p>.<p>ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ ರಾಣಾ(59)ನನ್ನುಬಂಧಿಸಿ, ತಮ್ಮ ದೇಶಕ್ಕೆ ಹಸ್ತಾಂತರಿಸುವಂತೆ ಭಾರತ, ಅಮೆರಿಕವನ್ನು ಕೇಳಿತ್ತು. ಈ ಕಾರಣ ಆತನನ್ನು ಜೂನ್ 10ರಂದು ಲಾಸ್ ಏಂಜಲೀಸ್ನಲ್ಲಿ ಬಂಧಿಸಲಾಗಿತ್ತು. ರಾಣಾ, ಮುಂಬೈ ದಾಳಿ ರೂವಾರಿ ಡೇವಿಡ್ ಕೊಲ್ಮೆನ್ ಹೆಡ್ಲಿಯ ಬಾಲ್ಯ ಸ್ನೇಹಿತ. ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತ ವಿಚಾರಣೆ ಫೆ.12ಕ್ಕೆ ನಿಗದಿಪಡಿಸಲಾಗಿದೆ.</p>.<p>ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ರಾಣಾನನ್ನು ಬಂಧನದಿಂದ ಮುಕ್ತಗೊಳಿಸಬೇಕು ಎಂದು ರಾಣಾ ಪರ ವಕೀಲರು ಕೋರಿದ್ದಾರೆ. ಲಾಸ್ ಏಂಜಲೀಸ್ನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಎದುರು ಅಮೆರಿಕ ಸರ್ಕಾರದ ಅಟಾರ್ನಿ ನಿಕೋಲಾ ಟಿ ಹಾನ್ನಾ ಅವರು ರಾಣಾ ಬಿಡುಗಡೆ ವಿರೋಧಿಸಿ ಗೊತ್ತುವಳಿ ಮಂಡಿಸಿದ್ದಾರೆ.</p>.<p>’ರಾಣಾ ಪರಾರಿಯಾಗುವುದಿಲ್ಲ, ಸಮುದಾಯಕ್ಕೆ ಯಾವುದೇ ರೀತಿಯಲ್ಲೂ ಅಪಾಯ ಎಸಗುವುದಿಲ್ಲ ಎಂಬುದನ್ನು ಸಾಬೀತು ಪಡಿಸಿದರೆ ಮಾತ್ರ ವಿಶೇಷ ಸಂದರ್ಭದಲ್ಲಿ ಆತನಿಗೆ ಜಾಮೀನು ನೀಡಬಹುದು‘ ಎಂದು ಅಟಾರ್ನಿ ಹೇಳಿದ್ದಾರೆ.</p>.<p>ಪಾಕಿಸ್ತಾನ-ಅಮೆರಿಕನ್ ಎಲ್ಇಟಿ ಭಯೋತ್ಪಾದಕ ಹೆಡ್ಲಿ 2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚು ರೂಪಿಸಿದ್ದ. ಈತ ಪೊಲೀಸರ ಎದುರು ತಪ್ಪು ಒಪ್ಪಿಕೊಂಡು, ದಾಳಿಯಲ್ಲಿ ಸಂಚು ರೂಪಿಸಿದ್ದಾಗಿ ಅಮೆರಿಕದಲ್ಲಿ 35 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>