<p><strong>ವಾಷಿಂಗ್ಟನ್</strong>: ಜೋ ಬೈಡನ್ ನೇತೃತ್ವದ ಅಮೆರಿಕ ಸರ್ಕಾರವು ಮ್ಯಾನ್ಮಾರ್ ಪ್ರಜೆಗಳಿಗೆ ಅಮೆರಿಕದಲ್ಲಿ ಕಾನೂನಾತ್ಮಕ ರೀತಿಯಲ್ಲಿ ತಾತ್ಕಾಲಿಕವಾಗಿ ನೆಲೆಸಲು ಅನುಮತಿ ನೀಡಿದೆ. ಈಗಾಗಲೇ ಅಮೆರಿಕದಲ್ಲಿ ನೆಲೆಸಿರುವ ಮ್ಯಾನ್ಮಾರ್ನ ಪ್ರಜೆಗಳಿಗೆ ಮಾತ್ರ ಈ ಅವಕಾಶವನ್ನು ಕಲ್ಪಿಸಲಾಗಿದೆ.</p>.<p>‘ಅಮೆರಿಕದಲ್ಲಿ ವಾಸವಿರುವ ಮ್ಯಾನ್ಮಾರ್ನ ಜನರಿಗೆ ತಾತ್ಕಾಲಿಕ ರಕ್ಷಣೆ ನೀಡಲಾಗಿದೆ. ಇದು 18 ತಿಂಗಳವರೆಗೂ ಇರುತ್ತದೆ’ ಎಂದು ಹೋಂಲ್ಯಾಂಡ್ ಸೆಕ್ಯುರಿಟಿ ಇಲಾಖೆಯ ಕಾರ್ಯದರ್ಶಿ ಅಲೆಜಾಂಡ್ರೊ ಮಯೋಕಾರ್ಸ್ ಅವರು ತಿಳಿಸಿದ್ದಾರೆ.</p>.<p>‘ಮ್ಯಾನ್ಮಾರ್ನಲ್ಲಿ ಮಿಲಿಟರಿ ದಂಗೆಯಿಂದಾಗಿ ಮಾನವೀಯತೆ ನಾಶವಾಗುತ್ತಿದೆ. ಅಲ್ಲದೆ ಆರ್ಥಿಕ ಬಿಕ್ಕಟ್ಟು ಕೂಡ ಹೆಚ್ಚಿದೆ. ಇದರಿಂದಾಗಿ ಬೇರೆ ದೇಶಗಳಲ್ಲಿ ನೆಲೆಸಿರುವ ಮ್ಯಾನ್ಮಾರ್ ಪ್ರಜೆಗಳಿಗೆ ತನ್ನ ರಾಷ್ಟ್ರಕ್ಕೆ ಮರಳಲು ಬಹಳ ಕಷ್ಟವಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.</p>.<p>ಫೆಬ್ರುವರಿ 1ರಂದು ನಾಯಕಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದ ವಿರುದ್ಧ ದಂಗೆ ಎದ್ದು, ಮಿಲಿಟರಿ ಆಡಳಿತ ಚುಕ್ಕಾಣಿ ಹಿಡಿಯಿತು. ಇದನ್ನು ವಿರೋಧಿಸಿ ಮ್ಯಾನ್ಮಾರ್ನಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಭದ್ರತಾ ಪಡೆಗಳು ಪ್ರತಿಭಟನಕಾರರನ್ನು ಚದುರಿಸಲು ಹಿಂಸಾಚಾರವನ್ನು ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಜೋ ಬೈಡನ್ ನೇತೃತ್ವದ ಅಮೆರಿಕ ಸರ್ಕಾರವು ಮ್ಯಾನ್ಮಾರ್ ಪ್ರಜೆಗಳಿಗೆ ಅಮೆರಿಕದಲ್ಲಿ ಕಾನೂನಾತ್ಮಕ ರೀತಿಯಲ್ಲಿ ತಾತ್ಕಾಲಿಕವಾಗಿ ನೆಲೆಸಲು ಅನುಮತಿ ನೀಡಿದೆ. ಈಗಾಗಲೇ ಅಮೆರಿಕದಲ್ಲಿ ನೆಲೆಸಿರುವ ಮ್ಯಾನ್ಮಾರ್ನ ಪ್ರಜೆಗಳಿಗೆ ಮಾತ್ರ ಈ ಅವಕಾಶವನ್ನು ಕಲ್ಪಿಸಲಾಗಿದೆ.</p>.<p>‘ಅಮೆರಿಕದಲ್ಲಿ ವಾಸವಿರುವ ಮ್ಯಾನ್ಮಾರ್ನ ಜನರಿಗೆ ತಾತ್ಕಾಲಿಕ ರಕ್ಷಣೆ ನೀಡಲಾಗಿದೆ. ಇದು 18 ತಿಂಗಳವರೆಗೂ ಇರುತ್ತದೆ’ ಎಂದು ಹೋಂಲ್ಯಾಂಡ್ ಸೆಕ್ಯುರಿಟಿ ಇಲಾಖೆಯ ಕಾರ್ಯದರ್ಶಿ ಅಲೆಜಾಂಡ್ರೊ ಮಯೋಕಾರ್ಸ್ ಅವರು ತಿಳಿಸಿದ್ದಾರೆ.</p>.<p>‘ಮ್ಯಾನ್ಮಾರ್ನಲ್ಲಿ ಮಿಲಿಟರಿ ದಂಗೆಯಿಂದಾಗಿ ಮಾನವೀಯತೆ ನಾಶವಾಗುತ್ತಿದೆ. ಅಲ್ಲದೆ ಆರ್ಥಿಕ ಬಿಕ್ಕಟ್ಟು ಕೂಡ ಹೆಚ್ಚಿದೆ. ಇದರಿಂದಾಗಿ ಬೇರೆ ದೇಶಗಳಲ್ಲಿ ನೆಲೆಸಿರುವ ಮ್ಯಾನ್ಮಾರ್ ಪ್ರಜೆಗಳಿಗೆ ತನ್ನ ರಾಷ್ಟ್ರಕ್ಕೆ ಮರಳಲು ಬಹಳ ಕಷ್ಟವಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.</p>.<p>ಫೆಬ್ರುವರಿ 1ರಂದು ನಾಯಕಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದ ವಿರುದ್ಧ ದಂಗೆ ಎದ್ದು, ಮಿಲಿಟರಿ ಆಡಳಿತ ಚುಕ್ಕಾಣಿ ಹಿಡಿಯಿತು. ಇದನ್ನು ವಿರೋಧಿಸಿ ಮ್ಯಾನ್ಮಾರ್ನಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಭದ್ರತಾ ಪಡೆಗಳು ಪ್ರತಿಭಟನಕಾರರನ್ನು ಚದುರಿಸಲು ಹಿಂಸಾಚಾರವನ್ನು ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>