ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಪಾಕಿಸ್ತಾನದ ಉನ್ನತ ಮಟ್ಟದ ಸಮಿತಿಯ ಪ್ರಸ್ತಾವನೆಯನ್ನುಏಪ್ರಿಲ್ 1ರಂದು ಪಾಕಿಸ್ತಾನ ಸಚಿವ ಸಂಪುಟ ತಿರಸ್ಕರಿಸಿತ್ತು. ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಆದೇಶವನ್ನು ಹಿಂದಕ್ಕೆ ಪಡೆಯುವವರೆಗೂ, ಭಾರತದೊಂದಿಗಿನ ಸಂಬಂಧಗಳನ್ನು ಮುಂದುವರಿಸುವುದಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಶಿ ಅವರು ಹೇಳುವ ಮೂಲಕ ಸಚಿವ ಸಂಪುಟದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.