<p><strong>ವಾಷಿಂಗ್ಟನ್</strong>: ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಳಜಿಯುಕ್ತ ವಿಷಯಗಳಿಗೆ ಸಂಬಂಧಿಸಿದಂತೆ ನಡೆಯುವ ನೇರ ಮಾತುಕತೆಗಳನ್ನು ಉತ್ತೇಜಿಸುತ್ತೇವೆ. ಆದರೆ ಭಾರತದಿಂದ ಹತ್ತಿ ಮತ್ತು ಸಕ್ಕರೆಯ ಆಮದು ಮಾಡಿಕೊಳ್ಳದಿರಲು ಪಾಕಿಸ್ತಾನದ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿದೆ.</p>.<p>‘ನಾನು ನಿರ್ದಿಷ್ಟವಾಗಿ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ‘ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ನಾವು ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಳಜಿಯ ವಿಷಯಗಳ ಬಗ್ಗೆ ನೇರ ಮಾತುಕತೆಯನ್ನು ಬೆಂಬಲಿಸುತ್ತೇವೆ‘ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಪಾಕಿಸ್ತಾನದ ಉನ್ನತ ಮಟ್ಟದ ಸಮಿತಿಯ ಪ್ರಸ್ತಾವನೆಯನ್ನುಏಪ್ರಿಲ್ 1ರಂದು ಪಾಕಿಸ್ತಾನ ಸಚಿವ ಸಂಪುಟ ತಿರಸ್ಕರಿಸಿತ್ತು. ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಆದೇಶವನ್ನು ಹಿಂದಕ್ಕೆ ಪಡೆಯುವವರೆಗೂ, ಭಾರತದೊಂದಿಗಿನ ಸಂಬಂಧಗಳನ್ನು ಮುಂದುವರಿಸುವುದಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಶಿ ಅವರು ಹೇಳುವ ಮೂಲಕ ಸಚಿವ ಸಂಪುಟದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಳಜಿಯುಕ್ತ ವಿಷಯಗಳಿಗೆ ಸಂಬಂಧಿಸಿದಂತೆ ನಡೆಯುವ ನೇರ ಮಾತುಕತೆಗಳನ್ನು ಉತ್ತೇಜಿಸುತ್ತೇವೆ. ಆದರೆ ಭಾರತದಿಂದ ಹತ್ತಿ ಮತ್ತು ಸಕ್ಕರೆಯ ಆಮದು ಮಾಡಿಕೊಳ್ಳದಿರಲು ಪಾಕಿಸ್ತಾನದ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿದೆ.</p>.<p>‘ನಾನು ನಿರ್ದಿಷ್ಟವಾಗಿ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ‘ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ನಾವು ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಳಜಿಯ ವಿಷಯಗಳ ಬಗ್ಗೆ ನೇರ ಮಾತುಕತೆಯನ್ನು ಬೆಂಬಲಿಸುತ್ತೇವೆ‘ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಪಾಕಿಸ್ತಾನದ ಉನ್ನತ ಮಟ್ಟದ ಸಮಿತಿಯ ಪ್ರಸ್ತಾವನೆಯನ್ನುಏಪ್ರಿಲ್ 1ರಂದು ಪಾಕಿಸ್ತಾನ ಸಚಿವ ಸಂಪುಟ ತಿರಸ್ಕರಿಸಿತ್ತು. ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಆದೇಶವನ್ನು ಹಿಂದಕ್ಕೆ ಪಡೆಯುವವರೆಗೂ, ಭಾರತದೊಂದಿಗಿನ ಸಂಬಂಧಗಳನ್ನು ಮುಂದುವರಿಸುವುದಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಶಿ ಅವರು ಹೇಳುವ ಮೂಲಕ ಸಚಿವ ಸಂಪುಟದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>