<p><strong>ವಾಷಿಂಗ್ಟನ್: </strong>ಅಫ್ಗಾನಿಸ್ತಾನದಲ್ಲಿರುವ ಭಾರತೀಯರನ್ನು ಕರೆತರುವುದಕ್ಕಾಗಿ ಕಾಬೂಲ್ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ತುರ್ತಾಗಿ ಆರಂಭಿಸುವ ಅಗತ್ಯದ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಅವರೊಂದಿಗೆ ಚರ್ಚಿಸಿರುವುದಾಗಿ ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಟ್ವೀಟ್ ಮಾಡಿದ್ದಾರೆ.</p>.<p>ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಸೋಮವಾರ ನ್ಯೂಯಾರ್ಕ್ಗೆ ಆಗಮಿಸಿರುವ ಜೈಶಂಕರ್, ಅಫ್ಗಾನಿಸ್ತಾನದ ಪರಿಸ್ಥಿತಿ ಕುರಿತುಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್ ಅವರೊಂದಿಗೆ ಚರ್ಚಿಸುವ ವೇಳೆ, ಈ ವಿಷಯವನ್ನು ಒತ್ತಿ ಹೇಳಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಇಲ್ಲಿ ತಿಳಿಸಿದ್ದಾರೆ.</p>.<p>ಇದೇ ವೇಳೆ, ಜೈಶಂಕರ್ ಅವರು ಕಾಬೂಲ್ನಿಂದ ಭಾರತೀಯ ರಾಜತಾಂತ್ರಿಕರನ್ನು ಸ್ಥಳಾಂತರಿಸುವ ಕುರಿತು ಅಮೆರಿಕದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.</p>.<p>ಈ ಮಧ್ಯೆ, ಅಫ್ಗಾನಿಸ್ತಾನದ ಕಾಬೂಲ್ನಿಂದ ನೂರಕ್ಕೂ ಹೆಚ್ಚು ಭಾರತೀಯರನ್ನು ಹೊತ್ತ ಸಿ–17 ಭಾರತೀಯ ವಾಯುಪಡೆಯ ವಿಮಾನ ಮಂಗಳವಾರ ಮಧ್ಯಾಹ್ನ ಗುಜರಾತ್ನ ಜಾಮ್ನಗರದ ಎಐಎಫ್ ವಾಯುನೆಲೆಗೆ ಬಂದಿಳಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್: </strong>ಅಫ್ಗಾನಿಸ್ತಾನದಲ್ಲಿರುವ ಭಾರತೀಯರನ್ನು ಕರೆತರುವುದಕ್ಕಾಗಿ ಕಾಬೂಲ್ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ತುರ್ತಾಗಿ ಆರಂಭಿಸುವ ಅಗತ್ಯದ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಅವರೊಂದಿಗೆ ಚರ್ಚಿಸಿರುವುದಾಗಿ ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಟ್ವೀಟ್ ಮಾಡಿದ್ದಾರೆ.</p>.<p>ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಸೋಮವಾರ ನ್ಯೂಯಾರ್ಕ್ಗೆ ಆಗಮಿಸಿರುವ ಜೈಶಂಕರ್, ಅಫ್ಗಾನಿಸ್ತಾನದ ಪರಿಸ್ಥಿತಿ ಕುರಿತುಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್ ಅವರೊಂದಿಗೆ ಚರ್ಚಿಸುವ ವೇಳೆ, ಈ ವಿಷಯವನ್ನು ಒತ್ತಿ ಹೇಳಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಇಲ್ಲಿ ತಿಳಿಸಿದ್ದಾರೆ.</p>.<p>ಇದೇ ವೇಳೆ, ಜೈಶಂಕರ್ ಅವರು ಕಾಬೂಲ್ನಿಂದ ಭಾರತೀಯ ರಾಜತಾಂತ್ರಿಕರನ್ನು ಸ್ಥಳಾಂತರಿಸುವ ಕುರಿತು ಅಮೆರಿಕದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.</p>.<p>ಈ ಮಧ್ಯೆ, ಅಫ್ಗಾನಿಸ್ತಾನದ ಕಾಬೂಲ್ನಿಂದ ನೂರಕ್ಕೂ ಹೆಚ್ಚು ಭಾರತೀಯರನ್ನು ಹೊತ್ತ ಸಿ–17 ಭಾರತೀಯ ವಾಯುಪಡೆಯ ವಿಮಾನ ಮಂಗಳವಾರ ಮಧ್ಯಾಹ್ನ ಗುಜರಾತ್ನ ಜಾಮ್ನಗರದ ಎಐಎಫ್ ವಾಯುನೆಲೆಗೆ ಬಂದಿಳಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>