ವಿಶ್ವಸಂಸ್ಥೆ: ಗಡಿಯಾಚೆಗಿನ ಭಯೋತ್ಪಾದನೆಯನ್ನು ಭಾರತ ನಿರಂತರವಾಗಿ ಎದುರಿಸುತ್ತಿದೆ. ಪಾಕಿಸ್ತಾನದ ಮೂಲದ ಭಯೋತ್ಪಾದಕರು ನಡೆಸಿದ 2008ರ ಮುಂಬೈ ಹಾಗೂ 2016ರ ಪಠಾಣ್ ಕೋಟ್ ದಾಳಿಯಿಂದ ಅಪಾರ ಸಾವು–ನೋವು ಉಂಟಾಗಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಇನ್ನೂ ಸಾಧ್ಯವಾಗಿಲ್ಲ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಗುರುವಾರ ಭಾರತ ವಿಷಾದಿಸಿದೆ.